alex Certify ಸಿಸಿ ಟಿವಿಯಲ್ಲಿ ಸೆರೆಯಾದ ಈ ದೃಶ್ಯ ನೋಡಿದ್ರೆ ಬೆಚ್ಚಿಬೀಳ್ತಿರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾದ ಈ ದೃಶ್ಯ ನೋಡಿದ್ರೆ ಬೆಚ್ಚಿಬೀಳ್ತಿರಿ…!

ಇಂದೋರ್​ ಸ್ಮಾರ್ಟ್ ಸಿಟಿ ಯೋಜನೆಗಾಗಿ ಕೆಲಸ ಮಾಡುತ್ತಿದ್ದ 32 ವರ್ಷದ ವಾಸ್ತುಶಿಲ್ಪಿ ಮೊದಲ ವಿವಾಹ ವಾರ್ಷಿಕೋತ್ಸವಕ್ಕೆ ಇನ್ನೇನು 4 ದಿನ ಇದೆ ಅನ್ನೋವಾಗಲೇ ರಸ್ತೆ ಅಪಘಾತವೊಂದರಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಸಿದ್ಧಾರ್ಥ್​ ಸೋನಿ ರಸ್ತೆ ಅಪಘಾತದಲ್ಲಿ ಸಾವೀಗಿಡಾದ ವ್ಯಕ್ತಿ. ಪಲಾಸಿಯಾ ಪ್ರದೇಶದ ಬಳಿ ಕಾರಿನಲ್ಲಿ ತೆರಳುತ್ತಿದ್ದ ಸಿದ್ಧಾರ್ಥ್​ ಅಕಸ್ಮಾತ್​ ಆಗಿ ವಿಕಾಸ್​ ಯಾದವ್​ ಎಂಬವರ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ.

ತಕ್ಷಣ ಕಾರಿನಿಂದ ಇಳಿದ ಸಿದ್ಧಾರ್ಥ್ ವಿಕಾಸ್​ ಬಳಿ ಕ್ಷಮೆಯಾಚಿಸಿದ್ದಾರೆ. ಆದರೆ ವಿಕಾಸ್​ ಏಕಾಏಕಿ ಸಿದ್ಧಾರ್ಥ್ ಮೇಲೆ ಹಲ್ಲೆ ನಡೆಸಿದ್ದಾರೆ. ಸಿದ್ಧಾರ್ಥ್​ರನ್ನ ವಿಕಾಸ್​ ರಸ್ತೆ ಬದಿಗೆ ತಳ್ಳಿದ್ದಾರೆ. ಆದರೆ ಹಿಂಬಂಧಿಯಿಂದ ಬರುತ್ತಿದ್ದ ಲಾರಿಯ ಚಕ್ರದಡಿಯಲ್ಲಿ ಸಿದ್ಧಾರ್ಥ್​ ಸಿಲುಕಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ‌

ಟ್ರಕ್​ ಸ್ಥಳದಿಂದ ತೆರಳುತ್ತಿದ್ದಂತೆಯೇ ವಿಕಾಸ್​ ಸ್ಥಳದಿಂದ ಎಸ್ಕೇಪ್​ ಆಗಿದ್ದಾನೆ. ಅಪಘಾತದ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಪೊಲೀಸರು ಲಾರಿ ಚಾಲಕ ಹಾಗೂ ವಿಕಾಸ್​ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

https://twitter.com/i/status/1339869863016218624

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...