alex Certify ಬಡವರಿಗೆ ಮತ್ತೊಂದು ಉಡುಗೊರೆ ನೀಡಲು ಸಿದ್ಧವಾಗಿದೆ ಕೇಂದ್ರ ʼಸರ್ಕಾರʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ಮತ್ತೊಂದು ಉಡುಗೊರೆ ನೀಡಲು ಸಿದ್ಧವಾಗಿದೆ ಕೇಂದ್ರ ʼಸರ್ಕಾರʼ

ಕೊರೊನಾ ಬಿಕ್ಕಟ್ಟಿನ ಮಧ್ಯೆ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಶೀಘ್ರವೇ ಖುಷಿ ಸುದ್ದಿ ನೀಡಲಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒನ್ ನೇಷನ್-ಒನ್ ರೇಷನ್ ಕಾರ್ಡ್ ಸೇವೆ ಜಾರಿಗೆ ತರಲಿದೆ. ಜೂನ್ 1ರಿಂದ ಈ ಸೇವೆ ಶುರುವಾಗಲಿದೆ ಎನ್ನಲಾಗ್ತಿದೆ.

ಸುಪ್ರೀಂ ಕೋರ್ಟ್ ಕೂಡ ಆದಷ್ಟು ಬೇಗ ಒನ್ ನೇಷನ್-ಒನ್ ರೇಷನ್ ಕಾರ್ಡ್ ಸೇವೆ ಶುರು ಮಾಡುವಂತೆ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಈ ಯೋಜನೆ ಲಾಕ್ ಡೌನ್ ಸಂದರ್ಭದಲ್ಲಿ ಸಾಕಷ್ಟು ಪ್ರಯೋಜನಕಾರಿಯಾಗಲಿದೆ.ಈ ಯೋಜನೆ ಪ್ರಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅರ್ಹ ಫಲಾನುಭವಿಗಳು ತಮ್ಮ ಆಹಾರ ಧಾನ್ಯಗಳ ಪಾಲನ್ನು ದೇಶದ ಯಾವುದೇ ನ್ಯಾಯಯುತ ಬೆಲೆ ಅಂಗಡಿಯಿಂದ ಒಂದೇ ಪಡಿತರ ಚೀಟಿ ಬಳಸಿ ಪಡೆಯಲು ಸಾಧ್ಯವಾಗುತ್ತದೆ.

ಜೂನ್ 1 ರಿಂದ ಒಟ್ಟು 20 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ಪಡಿತರ ಚೀಟಿ ಪೋರ್ಟಬಿಲಿಟಿ ಪ್ರಾರಂಭಿಸಲು ಸಿದ್ಧವಾಗಲಿವೆ. ದೇಶಾದ್ಯಂತ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಎಲ್ಲಾ ಪಿಡಿಎಸ್ ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳನ್ನು ಅಳವಡಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...