ನವದೆಹಲಿ: ಲಾಕ್ ಡೌನ್ ತೆರವುಗೊಳಿಸಬೇಕೆಂದು ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ಹೇಳಿದ್ದಾರೆ. ಆರ್ಥಿಕ ಚಟುವಟಿಕೆಗಳು ಪುನಾರಂಭವಾಗಬೇಕಿದೆ. ಶಾಲಾ-ಕಾಲೇಜುಗಳು ಬೇಸಿಗೆ ರಜೆ ಮುಗಿದ ಮೇಲೆ ಪುನಾರಂಭ ಆಗಬೇಕು. ಇದಕ್ಕಾಗಿ ಪೂರಕ ಚಟುವಟಿಕೆ ಆರಂಭವಾಗಬೇಕಿದೆ ಎಂದು ಹೇಳಿದ್ದಾರೆ.
ಲಾಕ್ಡೌನ್ ಕಂಟೇನ್ಮೆಂಟ್ ಜೋನ್ ಗಳಿಗೆ ಮಾತ್ರ ಸೀಮಿತವಾಗಿರಬೇಕು. ಉಳಿದೆಡೆ ಲಾಕ್ ಡೌನ್ ತೆರವುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
ಬೇಸಿಗೆ ರಜೆಯ ಬಳಿಕ ಶಾಲಾ ಕಾಲೇಜು ಆರಂಭಿಸಬೇಕಿದೆ. ಸಾರ್ವಜನಿಕ ಸಾರಿಗೆ ಕೂಡ ಆರಂಭವಾಗಬೇಕಿದೆ. ಎಂದು ಹೇಳುವು ಮೂಲಕ ಲಾಕ್ಡೌನ್ ತೆರವುಗೊಳಿಸುವುದರ ಪರ ವಿಜಯ ರೂಪಾನಿ ಬ್ಯಾಟಿಂಗ್ ಮಾಡಿದ್ದಾರೆ.
ಲಾಕ್ದೊಳ್ ನಿರ್ಧಾರ ಮುಖ್ಯಮಂತ್ರಿಗಳಿಗೆ ನೀಡಬೇಕೆಂದು ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆ ಲಾಕ್ಡೌನ್ ಮುಂದುವರೆಸುವ ಬಗ್ಗೆ ರಾಜ್ಯಗಳಿಗೆ ಅವಕಾಶ ನೀಡಬೇಕೆಂದು 7 ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಲಾಕ್ ಡೌನ್ ಕುರಿತಾಗಿ ಹಲವು ಸಲಹೆಗಳನ್ನು ಕೂಡ ನೀಡಿದ್ದಾರೆ.
ಲಾಕ್ ಡೌನ್ ಕುರಿತಾದ ನಿರ್ಧಾರವನ್ನು ಮುಖ್ಯಮಂತ್ರಿಗಳಿಗೆ ಬಿಡಬೇಕೆಂದು ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಅವರೊಂದಿಗಿನ ವಿಡಿಯೋ ಸಂವಾದದಲ್ಲಿ ಮನವಿ ಮಾಡಿದ್ದಾರೆ.