ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧೆಡೆ ಪ್ರಚಾರ ಸಭೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಮಯದಲ್ಲಿ ಎನ್ಡಿಎ ಸರ್ಕಾರ ಬಡವರಿಗೆ ಆದ್ಯತೆ ನೀಡಿದೆ. ಬಡವರ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗಿದೆ ಎಂದು ಹೇಳಿದ್ದಾರೆ.
ಚುನಾವಣೆಗೆ ಮೊದಲೇ ಬಿಹಾರದ ಜನ ಸಂದೇಶ ನೀಡಿದ್ದಾರೆ. ಎಲ್ಲಾ ಸಮೀಕ್ಷೆಗಳು ಎನ್ಡಿಎ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹೇಳಿದ್ದು ಕೆಲವರು ವದಂತಿಯನ್ನು ಹರಡುತ್ತಿದ್ದಾರೆ. ಆದರೆ, ಬಿಹಾರದ ಜನ ಮೂರ್ಖರಾಗುವುದಿಲ್ಲ ಎಂದು ಮೋದಿ ಹೇಳಿದ್ದಾರೆ.
ಇನ್ನೂ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ ಅವರು, ನಾವು ಬಡವರು ಮತ್ತು ದೀನದಲಿತರಿಗಾಗಿ ಕೆಲಸ ಮಾಡುತ್ತಿದ್ದೇವೆ. ಮುಂದಿನ 10 ವರ್ಷಗಳವರೆಗೆ ದಲಿತರು, ಒಬಿಸಿ ವರ್ಗದವರಿಗೆ ಮೀಸಲಾತಿ ವಿಸ್ತರಿಸಿದ್ದೇವೆ. ಮೇಲ್ಜಾತಿಯಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಸಿಗುತ್ತದೆ ಎಂದು ತಿಳಿಸಿದ್ದಾರೆ.