ನವದೆಹಲಿ: ಇಂದು ಬುದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಷಣ ಮಾಡಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೋರೋನಾ ವಾರಿಯರ್ಸ್ ಉದ್ದೇಶಿಸಿ ಮಾತನಾಡಲಿದ್ದಾರೆ. ಬುದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು ಕೊರೋನಾ ವೈರಸ್ ಕುರಿತಾಗಿ ಮಾತನಾಡಬಹುದು. ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಳಗ್ಗೆ 9 ಗಂಟೆಗೆ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೊರೋನಾ ವಾರಿಯರ್ಸ್ ಜೊತೆಗೆ ಮಾತನಾಡಲಿದ್ದು, ಅವರಿಗಾಗಿ ವಿಶೇಷ ಪ್ಯಾಕೇಜ್ ನೀಡಬಹುದು. ಇಲ್ಲವೇ ಕೆಲವು ಸಲಹೆ ಸೂಚನೆ ನೀಡಬಹುದಾಗಿದ್ದು, ಅವರ ವಿಡಿಯೋ ಕಾನ್ಫರೆನ್ಸ್ ಸಾಕಷ್ಟು ಕುತೂಹಲ ಗರಿಗೆದರುವಂತೆ ಮಾಡಿದೆ.