alex Certify Breaking: ಮುಂದೂಡಿಕೆಯಾಗುತ್ತಾ CBSE ಪರೀಕ್ಷೆ…? ಮಹತ್ವದ ಸಭೆ ಕರೆದ ಪ್ರಧಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking: ಮುಂದೂಡಿಕೆಯಾಗುತ್ತಾ CBSE ಪರೀಕ್ಷೆ…? ಮಹತ್ವದ ಸಭೆ ಕರೆದ ಪ್ರಧಾನಿ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಇಂದು ಒಂದೇ ದಿನ 1 ಲಕ್ಷದ 80 ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಆತಂಕ ಹುಟ್ಟಿಸಿದೆ.

ಇದರ ಮಧ್ಯೆ ಈ ಬಾರಿಯ ಸಿ.ಬಿ.ಎಸ್.‌ಇ. 10 ಮತ್ತು 12 ನೇ ತರಗತಿ ಪರೀಕ್ಷೆಗಳ ಭವಿಷ್ಯ ಅನಿಶ್ಚಿತವಾಗಿದೆ. ಈಗಾಗಲೇ ಹಲವರು ಪರೀಕ್ಷೆಗಳನ್ನು ಮುಂದೂಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷೆ ನಡೆಸುವ ಕುರಿತಂತೆ ಪರಾಮರ್ಶೆ ನಡೆಸಲು ಮಹತ್ವದ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಶಿಕ್ಷಣ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮೋದಿಯವರು ಸಭೆ ನಡೆಸಲಿದ್ದು, ಬಳಿಕ ಪರೀಕ್ಷೆ ಕುರಿತಂತೆ ನಿರ್ಧಾರ ಹೊರ ಬೀಳಲಿದೆ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...