ದೇಶದಲ್ಲಿ ಎರಡನೇ ಲಾಕ್ ಡೌನ್ ಮುಕ್ತಾಯಗೊಳ್ಳಲು ಇನ್ನೆರಡು ದಿನ ಬಾಕಿಯಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಕೇಂದ್ರ ಸಚಿವರು ಹಾಗೂ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ ಮೋದಿ ಲಾಕ್ ಡೌನ್ ನಂತ್ರ ಮುಂದೇನು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ.
ಲಾಕ್ ಡೌನ್ ನಂತ್ರ ದೇಶವನ್ನು ಹೇಗೆ ಮುನ್ನಡೆಸಬೇಕು ಹಾಗೂ ಮತ್ತೆ ಹೇಗೆ ಕೆಲಸ ಪ್ರಾರಂಭಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಕೊರೊನಾ ಸೋಂಕಿಗೆ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,147 ಕ್ಕೇರಿದೆ. ಸೋಂಕಿತರ ಸಂಖ್ಯೆ 35,043 ಕ್ಕೆ ಏರಿದೆ.
ಲಾಕ್ ಡೌನ್ ಮಧ್ಯೆಯೂ ಕೊರೊನಾ ಸೋಂಕಿಗೆ ಒಳಗಾಗ್ತಿರುವವರ ಸಂಖ್ಯೆ ಹೆಚ್ಚಾಗ್ತಾನೆ ಇದೆ. ಹಾಗಾಗಿ ಮುಂದಿನ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳುವ ಅಗತ್ಯವಿದೆ. ಈಗಾಗಲೇ ವಲಯ ವಿನಿಮಯದ ನೀತಿಯನ್ನು ಕೇಂದ್ರ ಬದಲಿಸಿದೆ.