ನವದೆಹಲಿ: ಕೊರೋನಾ ಸೋಂಕು ತಡೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಮೇ 3 ರ ನಂತರವೂ ಮುಂದುವರೆಯುವ ಸಾಧ್ಯತೆ ಇದೆ.
ಲಾಕ್ಡೌನ್ ನಿರ್ಬಂಧ ಸಡಿಲಗೊಳಿಸಲು ಹಲವು ಕೇಂದ್ರ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವರದಿ ಸಲ್ಲಿಸಿದ್ದಾರೆ.
ಏರ್ ಇಂಡಿಯಾ ಹಾಗೂ ಖಾಸಗಿ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಕೆಲವು ವಿಮಾನಯಾನ ಸಂಸ್ಥೆಗಳು ಟಿಕೆಟ್ ಬುಕಿಂಗ್ ಆರಂಭಿಸಿವೆ. ಕೇಂದ್ರ ಸರ್ಕಾರದಿಂದ ವಿಮಾನಯಾನ ಸಂಸ್ಥೆಗಳಿಗೆ ಮಹತ್ವದ ಸೂಚನೆ ನೀಡಲಾಗಿದ್ದು ಮೇ 3ರ ನಂತರ ವಿಮಾನ, ರೈಲು ಸಂಚಾರ ಸ್ಥಗಿತ ಮುಂದುವರೆಸಲು ಸೂಚನೆ ನೀಡಲಾಗಿದೆ. ಒಂದು ವೇಳೆ ಸಂಚಾರ ಆರಂಭವಾದರೆ ಸೋಂಕು ಕ್ಷಿಪ್ರಗತಿಯಲ್ಲಿ ಹರಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಯ ಕೇಂದ್ರ ಸಚಿವರು ಮೇ 3 ರ ನಂತರ ರೈಲು ವಿಮಾನ ಸಂಚಾರ ಬೇಡವೆಂದು ಸಲಹೆ ನೀಡಿದ್ದಾರೆ. ಕೇಂದ್ರ ಸಚಿವರ ಸಲಹೆ ಪರಿಗಣಿಸುವ ಬಗ್ಗೆ ಮೋದಿಗೆ ರಾಜನಾಥ್ ಸಿಂಗ್ ಸಲಹೆ ನೀಡಿದ್ದಾರೆ.