alex Certify BIG NEWS: ರಜನಿ ರಾಜಕೀಯ ಪ್ರವೇಶ ಕುರಿತು ನಾಳೆ ನಿರ್ಧಾರ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಜನಿ ರಾಜಕೀಯ ಪ್ರವೇಶ ಕುರಿತು ನಾಳೆ ನಿರ್ಧಾರ…?

ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಇನ್ನಾರು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಇದೇ ವೇಳೆ ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಕಳೆದ ಒಂದು ವರ್ಷದಿಂದಲೂ ಸಾಕಷ್ಟು ಚರ್ಚೆ ನಡೆಯುತ್ತಲೇ ಇದೆ.

ಈವರೆಗೂ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡುತ್ತಲೇ ಬಂದಿದ್ದ ರಜನೀಕಾಂತ್ ನವೆಂಬರ್ 30ರಂದು ಮಹತ್ವದ ಸಭೆ ಕರೆದಿದ್ದಾರೆ. ತಮ್ಮ ಆತ್ಮೀಯ ಬಳಗವನ್ನು ಸಭೆಗೆ ಆಹ್ವಾನಿಸಿದ್ದು, ರಾಜಕೀಯ ಪ್ರವೇಶದ ತೀರ್ಮಾನ ಪ್ರಕಟಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ರಜನೀ ಮಕ್ಕಳ ಮಂಡ್ರಂನ ಪದಾಧಿಕಾರಿಗಳ ಸಭೆ ಕರೆಯಲಾಗಿದ್ದು, ಅಲ್ಲಿ ತೀರ್ಮಾನ ಪ್ರಕಟಿಸಲಿದ್ದಾರೆಂಬ ಮಾಹಿತಿ ಇದೆ.

2017ರಲ್ಲೇ ರಜನೀಕಾಂತ್ ಚುನಾವಣೆ ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ನಡೆದಿತ್ತು. ಆದರೆ ಈವರೆಗೂ ತೀರ್ಮಾನ ಮಾಡಿರಲಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...