alex Certify ಸುಶಾಂತ್ ಸಿಂಗ್ ಪ್ರಕರಣ: ಸಿಬಿಐಗೆ ವಹಿಸಿದ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಶರದ್ ಪವಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಶಾಂತ್ ಸಿಂಗ್ ಪ್ರಕರಣ: ಸಿಬಿಐಗೆ ವಹಿಸಿದ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಶರದ್ ಪವಾರ್

ಮುಂಬೈ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್, ಸಿಬಿಐಗೆ ವಹಿಸಿದ ಬೆನ್ನಲ್ಲೇ ಎನ್ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಹೋರಾಟಗಾರ ನರೇಂದ್ರ ಧಾಬೋಲ್ಕರ್ ಅವರ ಹತ್ಯೆಯ ತನಿಖೆ ಬಗೆಹರಿಯದೇ ಉಳಿದಿರುವಂತೆಯೇ ಸುಶಾಂತ್ ಸಿಂಗ್ ರಜಪೂರ್ ಆತ್ಮಹತ್ಯೆ ಪ್ರಕರಣದ ತನಿಖೆಯು ಕೂಡ ನಡೆಸಲಾಗುವುದಿಲ್ಲ ಎಂದು ನಾನು ಭಾವಿಸುವುದಾಗಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಮತ್ತು ಸಂಪೂರ್ಣ ಸಹಕಾರ ನೀಡಲು ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರ ಇದನ್ನು ಗೌರವಿಸುತ್ತದೆ ಎನ್ನುವ ಖಾತರಿ ನನಗಿದೆ. ಆದರೆ, ಧಾಬೋಲ್ಕರ್ ಹತ್ಯೆ ಪ್ರಕರಣದ ಸಿಬಿಐ ತನಿಖೆ 2014ರಲ್ಲಿ ಆರಂಭವಾಗಿದ್ದು ಬಗೆಹರಿದಿಲ್ಲ. ಅದೇ ರೀತಿ ಸುಶಾಂತ್ ಸಿಂಗ್ ಪ್ರಕರಣದ ತನಿಖೆ ನಡೆಯಬಹುದೆಂದು ಭಾವಿಸುವುದಾಗಿ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...