
ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಈ ವಿಚಾರವಾಗಿ ಮಾತನಾಡಿ ಕೊರೊನಾದಿಂದಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಬಾಗಿಲು ಹಾಕಿವೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ನೆರವಾಗಲಿ ಎಂಬ ಕಾರಣಕ್ಕೆ ಈ ತಿಂಗಳಿನಿಂದ ಶಾಲೆಗಳು ಪುನಾರಂಭವಾಗುವವರೆಗೂ 2000 ರೂ. ಸಹಾಯ ಧನ ಹಾಗೂ 25 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ ಎಂದು ಹೇಳಿದ್ದಾರೆ.
ತೆಲಂಗಾಣ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸರಿ ಸುಮಾರು 50 ಲಕ್ಷ ಸಿಬ್ಬಂದಿಗೆ ಇದರಿಂದ ನೆರವಾಗಲಿದೆ ಎಂದು ತೆಲಂಗಾಣ ಸರ್ಕಾರ ಅಂದಾಜಿಸಿದೆ. ಈ ಯೋಜನೆಯ ಫಲಾನುಭವಿಯಾಗಲು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ತಮ್ಮ ಬ್ಯಾಂಕ್ ಖಾತೆ ವಿವರ ಹಾಗೂ ಇತರೆ ಸೂಕ್ತ ಮಾಹಿತಿ ನೀಡಬೇಕು ಸಿಎಂ ಹೇಳಿದ್ರು.