alex Certify ಬಿಗ್ ನ್ಯೂಸ್: ರಾಮಮಂದಿರ ಭೂಮಿಪೂಜೆ ದಿನವೇ 370 ನೇ ವಿಧಿ ರದ್ದಾಗಿ 1 ವರ್ಷ – ದಾಳಿಗೆ ಸಂಚು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ರಾಮಮಂದಿರ ಭೂಮಿಪೂಜೆ ದಿನವೇ 370 ನೇ ವಿಧಿ ರದ್ದಾಗಿ 1 ವರ್ಷ – ದಾಳಿಗೆ ಸಂಚು

ನವದೆಹಲಿ: ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು. ಆಗಸ್ಟ್ 5 ಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿ ರದ್ದುಪಡಿಸಿ ಒಂದು ವರ್ಷ ಪೂರ್ಣವಾಗಲಿದ್ದು ಇದೇ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಭಯೋತ್ಪಾದಕರು ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಪಾಕಿಸ್ತಾನ ಆರ್ಮಿ ವತಿಯಿಂದ ತರಬೇತಿ ಪಡೆದಿರುವ ತಾಲಿಬಾನ್ ಉಗ್ರಗಾಮಿಗಳ ಗುಂಪೊಂದು ಭಾರತದ ಕೆಲವೆಡೆ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

ಅಯೋಧ್ಯೆ, ದೆಹಲಿ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ಹಲವು ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಆಫ್ಘಾನಿಸ್ತಾನದ ಜಲಾಲಾಬಾದ್ ನಲ್ಲಿ ಪಾಕಿಸ್ತಾನ ಸೇನಾ ಪಡೆಯ ಯೋಧರು 20 ತಾಲಿಬಾನ್ ಉಗ್ರರಿಗೆ ತರಬೇತಿ ನೀಡಿದ್ದಾರೆ. ಇವರು ದಾಳಿಗೆ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...