alex Certify ಭೀಕರ ರಸ್ತೆ ಅಪಘಾತ: ಜವರಾಯನ ಅಟ್ಟಹಾಸಕ್ಕೆ ವಧು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ರಸ್ತೆ ಅಪಘಾತ: ಜವರಾಯನ ಅಟ್ಟಹಾಸಕ್ಕೆ ವಧು ಬಲಿ

ವಿಧಿಯಾಟದ ಮುಂದೆ ಯಾವುದೂ ಇಲ್ಲ ಅಂತಾರೆ. ಕೈಯಲ್ಲಿ ಮದರಂಗಿ ಹಚ್ಚಿ ಮುಂದಿನ ಜೀವನದ ಬಗ್ಗೆ ಕನಸು ಕಾಣುತ್ತಿದ್ದ ಮಧುಮಗಳು ಗಂಡನ ಮನೆಯ ಸೇರನ್ನ ಒದೆಯೋಕೂ ಮುನ್ನವೇ ಬಾರದ ಲೋಕಕ್ಕೆ ತೆರಳಿದ್ದಾಳೆ.

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಿ ವಧು – ವರರು ಹೊರಟಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಧುಮಗಳು ಸಾವನ್ನಪ್ಪಿದ ದಾರುಣ ಘಟನೆ ಫಾರುಕಾಬಾದ್​ನಲ್ಲಿ ನಡೆದಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಯಮಗಂಜ್​ ಬ್ಲಾಕ್​ನಲ್ಲಿ ಆಯೋಜಿಸಲಾಗಿದ್ದ ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಲ್ಲಿ ಮದುವೆ ಮುಗಿಸಿಕೊಂಡು ಕಿರಣ್​ ಹಾಗೂ ಪ್ರದೀಪ್​ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶುಕ್ರುಲ್ಲಾಪುರ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಧುಮಗಳು ಸೇರಿದಂತೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಆಂಬುಲೆನ್ಸ್ ಸ್ಥಳಕ್ಕೆ ತಲುಪುವಷ್ಟರಲ್ಲಿ ನವವಧು ಕಿರಣ್​ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನೊಂದು ದುರಾದೃಷ್ಟಕರ ವಿಚಾರ ಅಂದರೆ ಕಿರಣ್​ಗೆ ಇದು ಎರಡನೇ ಮದುವೆ. ಕಿರಣ್​ ಮೊದಲನೇ ಪತಿ ದೀಪು ಆರು ತಿಂಗಳ ಹಿಂದಷ್ಟೇ ಸಾವನ್ನಪ್ಪಿದ್ದರು. ಇದಾದ ಬಳಿಕ ದೀಪು ತಮ್ಮ ಪ್ರದೀಪ್​ ಜೊತೆ ಕಿರಣ್​ ಮದುವೆ ನೆರವೇರಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...