alex Certify ಕರ್ನಾಟಕಕ್ಕೆ ಆಕ್ಸಿಜನ್​ ರಿಲೀಫ್​​..! ರಾಜ್ಯಕ್ಕೆ 1200 ಮೆ.ಟನ್​ ಆಮ್ಲಜನಕ ಪೂರೈಸುವಂತೆ ಸುಪ್ರೀಂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕಕ್ಕೆ ಆಕ್ಸಿಜನ್​ ರಿಲೀಫ್​​..! ರಾಜ್ಯಕ್ಕೆ 1200 ಮೆ.ಟನ್​ ಆಮ್ಲಜನಕ ಪೂರೈಸುವಂತೆ ಸುಪ್ರೀಂ ಆದೇಶ

ಕರ್ನಾಟಕಕ್ಕೆ ನೀಡುತ್ತಿರುವ ಆಮ್ಲಜನಕದ ಪೂರೈಕೆಯ ಪ್ರಮಾಣವನ್ನ ಹೆಚ್ಚಿಸುವಂತೆ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶವನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ಕೇಂದ್ರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಕೇಂದ್ರ ಸರ್ಕಾರದ ಅರ್ಜಿಯನ್ನ ತಿರಸ್ಕರಿಸುವ ಮೂಲಕ ಸುಪ್ರೀಂ ಕೋರ್ಟ್ ರಾಜ್ಯ ಹೈಕೋರ್ಟ್ ಆದೇಶವನ್ನ ಎತ್ತಿ ಹಿಡಿದಿದೆ.

ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕದ ಅಭಾವದಿಂದಾಗಿ ಸೋಂಕಿತರು ಸಾವನ್ನಪ್ಪಿದ್ದ ಬಳಿಕ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಜ್ಯ ಹೈಕೋರ್ಟ್​ ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆಯನ್ನ 965 ಮೆ.ಟನ್​ನಿಂದ 1200 ಮೆ.ಟನ್​ಗೆ ಏರಿಕೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ ಕರ್ನಾಟಕ ಹೈಕೋರ್ಟ್​ನ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು.

ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ನೇತೃತ್ವದ ನ್ಯಾಯಪೀಠ ಕರ್ನಾಟಕಕ್ಕೆ ಆಕ್ಸಿಜನ್​ ರಿಲೀಫ್​ ನೀಡಿದೆ. ಕರ್ನಾಟಕ ಹೈಕೋರ್ಟ್​ನ ಆದೇಶದಂತೆಯೇ ರಾಜ್ಯಕ್ಕೆ 1200 ಮೆ. ಟನ್​​ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಿ ಎಂದು ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...