alex Certify ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಇಲ್ಲಿದೆ ಭರ್ಜರಿ ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಇಲ್ಲಿದೆ ಭರ್ಜರಿ ಶುಭ ಸುದ್ದಿ

ತಿರುಪತಿ: ಕೊರೋನಾ ಸೋಂಕು ತಡೆಯಲು ಲಾಕ್ ಡೌನ್ ಜಾರಿ ಮಾಡಿದ್ದರಿಂದ ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಭಕ್ತರಿಗೆ ದರ್ಶನ ಬಂದ್ ಮಾಡಲಾಗಿತ್ತು.

ಮೇ 17 ರ ನಂತರ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ. ಲಾಕ್ ಡೌನ್ ನಿರ್ಬಂಧದಿಂದ ಬಂದ್ ಆಗಿದ್ದ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯ ಮೇ 17ರ ನಂತರ ಬಾಗಿಲು ತೆರೆಯಲಿದ್ದು ದೇವಾಲಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಚೌಕ ರಚಿಸಲಾಗಿದೆ.

ಈ ಪ್ರಕಾರವೇ ಸರದಿಯಲ್ಲಿ ನಿಂತು ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬೇಕಿದೆ. ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲು ದೇಗುಲದಲ್ಲಿ ಸಿದ್ಧತೆ ಕೈಗೊಂಡಿದ್ದು ಮೇ 17 ಬಳಿಕ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...