ಕ್ವಾರಂಟೈನ್ ಮಾಡಲಾಗಿದ್ದ ವ್ಯಕ್ತಿಯೊಬ್ಬ ಅಲ್ಲಿನ ಅವ್ಯವಸ್ಥೆಗಳ ಕುರಿತು ವಿಡಿಯೋ ಮಾಡಿ ಹರಿಬಿಟ್ಟಿದ್ದು, ಇದರಿಂದ ಆಕ್ರೋಶಗೊಂಡ ಕೇಂದ್ರ ಸಚಿವೆ ಆಧಿಕಾರಿಗಳ ವಿರುದ್ದ ಕಿಡಿ ಕಾರಿರುವ ಘಟನೆ ನಡೆದಿದೆ.
ಛತ್ತೀಸ್ಗಡದ ಬಲರಾಮ್ ಪುರ ಕ್ವಾರಂಟೈನ್ ಕೇಂದ್ರದಲ್ಲಿ ದೆಹಲಿಯಿಂದ ಆಗಮಿಸಿದ್ದ ದಿಲೀಪ್ ಗುಪ್ತಾ ಎಂಬವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅಲ್ಲಿನ ಊಟದ ವ್ಯವಸ್ಥೆ ಕುರಿತು ಅಸಮಾಧಾನಗೊಂಡಿದ್ದ ಅವರು, ಈ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.
ಇದರಿಂದ ಆಕ್ರೋಶಗೊಂಡ ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವೆ ರೇಣುಕಾ ಸಿಂಗ್ ಬಲರಾಮ್ ಪುರ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ದಿಲೀಪ್ ಗುಪ್ತಾ ಅವರನ್ನು ಭೇಟಿ ಮಾಡಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ, ಕೊರೊನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರದ ಬಳಿ ಬಹಳಷ್ಟು ಹಣವಿದೆ. ಕತ್ತಲ ಕೋಣೆಯಲ್ಲಿ ಕೂಡಿ ಹಾಕಿ ಬೆಲ್ಟ್ ನಿಂದ ಹೊಡೆಯುವುದೂ ಗೊತ್ತು ಎಂದು ಹೇಳಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಚಿವೆ ದರ್ಪಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.