alex Certify ಕೆಲ ಅಲೋಪಥಿ ವೈದ್ಯರು ರಾಕ್ಷಸರು ಎಂದ ಉತ್ತರ ಪ್ರದೇಶ ಬಿಜೆಪಿ ಶಾಸಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲ ಅಲೋಪಥಿ ವೈದ್ಯರು ರಾಕ್ಷಸರು ಎಂದ ಉತ್ತರ ಪ್ರದೇಶ ಬಿಜೆಪಿ ಶಾಸಕ…!

ಯೋಗಗುರು ಬಾಬಾ ರಾಮ್​ದೇವ್​ ಹಾಗೂ ಭಾರತೀಯ ವೈದ್ಯಕೀಯ ಸಂಘದ ನಡುವಿನ ಜಟಾಪಟಿ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಇರುವಾಗಲೇ ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಬಿಜೆಪಿ ಶಾಸಕ ಇದೀಗ ಅಲೋಪಥಿ ವೈದ್ಯರ ವಿರುದ್ಧ ಹೊಸ ಬಾಂಬ್​ ಸಿಡಿಸಿದ್ದಾರೆ.

ಅಲೋಪಥಿ ಚಿಕಿತ್ಸೆ ವಿಚಾರದಲ್ಲಿ ಬಾಬಾ ರಾಮ್​ದೇವರ ಹೇಳಿಕೆಯನ್ನ ಸಮರ್ಥಿಸಿಕೊಂಡ ಬಿಜೆಪಿ ಶಾಸಕ ಸುರೇಂದ್ರ ಸಿಂಗ್,​​ ಕೆಲ ಅಲೋಪಥಿ ವೈದ್ಯರು ಸತ್ತ ರೋಗಿಗಳು ಬದುಕಿದ್ದಾರೆ ಎಂದು ಹೇಳಿ ಹಣವನ್ನ ಪೀಕುವ ಮೂಲಕ ರಾಕ್ಷಸರಾಗಿ ಬದಲಾಗಿದ್ದಾರೆ ಎಂದು ಹೇಳಿದ್ದಾರೆ.

ಬಾಬಾ ರಾಮ್​​ದೇವ್ ವಾದವನ್ನ ನಾನು ಬೆಂಬಲಿಸುತ್ತೇನೆ. ಅವರು ವೈದ್ಯಕೀಯ ವ್ಯವಸ್ಥೆಯನ್ನೇ ದೂಷಿಸಿಲ್ಲ. ಬದಲಾಗಿ ಪ್ರಾಚೀನ ಕಾಲದ ಆರ್ಯುವೇದ ಪದ್ಧತಿಯನ್ನ ಉತ್ತೇಜಿಸುತ್ತಿದ್ದಾರೆ. ಹೀಗಾಗಿ ಅವರ ವಾದವನ್ನ ನಾವೆಲ್ಲ ಬೆಂಬಲಿಸಬೇಕಿದೆ ಎಂದು ಹೇಳಿದ್ದಾರೆ.‌

ಆರ್ಯುವೇದ ಪದ್ಧತಿ ನಮ್ಮ ದೇಶವನ್ನ ಸ್ವಾಸ್ಥ್ಯ ಭಾರತವನ್ನಾಗಿ ನಿರ್ಮಿಸಲಿದೆ. ನಾನು ರಾಜಕೀಯ ಜೀವನದಿಂದ ನಿವೃತ್ತಿ ಹೊಂದಿದ ಬಳಿಕ ದೇಶದ ಆರೋಗ್ಯವನ್ನ ಕಾಪಾಡುವ ಸಲುವಾಗಿ ಯೋಗ ಹಾಗೂ ಆರ್ಯುವೇದದ ಲಾಭವನ್ನ ಪ್ರಚಾರ ಮಾಡುವ ಕಾರ್ಯ ಮಾಡುತ್ತೇನೆ ಎಂದು ಸಿಂಗ್​ ಹೇಳಿದ್ರು.

ಅಲೋಪಥಿ ಚಿಕಿತ್ಸೆಯಿಂದ ಒಳ್ಳೆಯದಾಗುತ್ತೆ ಇಲ್ಲ ಕೆಟ್ಟದಾಗುತ್ತೆ ಅನ್ನೋದರ ಬಗ್ಗೆ ನಾನು ಮಾತನಾಡೋದಿಲ್ಲ. ಆದರೆ ಅನೇಕ ಅಲೋಪಥಿ ವೈದ್ಯರು ಐಸಿಯುವಿನಲ್ಲಿ ಸತ್ತ ರೋಗಿಗಳು ಇನ್ನೂ ಬದುಕಿದ್ದಾರೆ ಎಂದು ಹೇಳುವ ಮೂಲಕ ಹಣ ಪೀಕುವ ಕೆಲಸ ಮಾಡ್ತಿದ್ದಾರೆ. ಈ ಮೂಲಕ ಅವರು ರಾಕ್ಷಸರಾಗಿದ್ದಾರೆ. ಆದರೆ ಅಲೋಪಥಿ ವೈದ್ಯರಲ್ಲೂ ಪ್ರಾಮಾಣಿಕರು ಇದ್ದಾರೆ. ಅಂತವರನ್ನ ನಾನು ಪ್ರಶಂಸಿಸುತ್ತೇನೆ. ಆದರೆ ಈ ಭ್ರಷ್ಟ ವೈದ್ಯರನ್ನ ಕ್ಷಮಿಸೋದು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...