alex Certify ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ರೋಹಿತ್ ಸರ್ದಾನಾ ಕೊರೊನಾ ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ರೋಹಿತ್ ಸರ್ದಾನಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ: ಹಿರಿಯ ಪತ್ರಕರ್ತ, ಆಜ್ ತಕ್ ವಾಹಿನಿಯ ಸುದ್ದಿ ನಿರೂಪಕ ರೋಹಿತ್ ಸರ್ದಾನಾ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ರೋಹಿತ್ ಸರ್ದಾನಾ ಅವರಿಗೆ ಕಳೆದ ವಾರ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಸರ್ದಾನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

2017ರಲ್ಲಿ ಆಜ್ ತಕ್ ಸುದ್ದಿ ವಾಹಿನಿಗೆ ಸೇರಿದ್ದ ರೋಹಿತ್ ಸರ್ದಾನಾ ‘ದಂಗಲ್’ ಎಂಬ ಚರ್ಚಾ ಕಾರ್ಯಕ್ರಮದ ಮೂಲಕ ಜನಪ್ರಿಯರಾಗಿದ್ದರು. ಇದಕ್ಕೂ ಮೊದಲು ಝೀ ನ್ಯೂಸ್ ಚಾನಲ್ ನಲ್ಲಿ ಕೂಡ ಕಾರ್ಯ ನಿರ್ವಹಿಸಿದ್ದರು. ರೋಹಿತ್ ಸರ್ದಾನಾ ಕೊರೊನಾ ಸೋಂಕಿಗೆ ಬಲಿಯಾಗಿರುವುದು ಸಹೋದ್ಯೋಗಿಗಳಲ್ಲಿ ಆಘಾತ ತಂದಿದೆ.

ರೋಹಿತ್ ಸರ್ದಾನಾ ಸಾವಿಗೆ ಸಂತಾಪ ಸೂಚಿಸಿರುವ ಗೃಹ ಸಚಿವ ಅಮಿತ್ ಶಾ, ದೇಶ ಇಂದು ಓರ್ವ ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ ಪತ್ರಕರ್ತನನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...