ನವದೆಹಲಿ: ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಕಾರ್ಮಿಕರಿಗೆ ಷರತ್ತುಗಳೊಂದಿಗೆ ಕೆಲಸಕ್ಕೆ ಅವಕಾಶ ನೀಡಿದೆ.
ಕಾರ್ಮಿಕರ ಅಂತರರಾಜ್ಯ ಸಂಚಾರಕ್ಕೆ ಅವಕಾಶ ಇಲ್ಲ. ಜಿಲ್ಲಾ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅಂತರ ಕಾಯ್ದುಕೊಂಡು ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಕೇಂದ್ರ ಗೃಹ ಇಲಾಖೆಯಿಂದ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.
ಸಂಚಾರಕ್ಕೆ ಸ್ಥಳೀಯ ಆಡಳಿತ ವ್ಯವಸ್ಥೆ ಮಾಡಬೇಕು. ಸಂಚಾರದ ಸಮಯದಲ್ಲಿ ಊಟದ ವ್ಯವಸ್ಥೆ ಕಲ್ಪಿಸಬೇಕು. ಬಸ್ ಗಳಲ್ಲಿ ಕಾರ್ಮಿಕರು ಅಂತರ ಕಾಯ್ದುಕೊಂಡು ಸಂಚಾರ ಮಾಡಬಹುದು.
ಸ್ಯಾನಿಟೈಸ್ ಮಾಡಿದ ಬಸ್ ನಲ್ಲಿಯೇ ಸಂಚಾರ ಮಾಡಬೇಕು. ಮನ್ರೇಗಾ, ಗ್ರಾಮೀಣ ಭಾಗದ ಕಾಮಗಾರಿಗಳಿಗೆ ಕೆಲಸಗಳಿಗೆ ಮಾತ್ರ ನಾಳೆಯಿಂದಲೇ ಮಾತ್ರ ಅನುಮತಿ ನೀಡಲಾಗಿದೆ. ಕೇಂದ್ರ ಗೃಹ ಇಲಾಖೆಯಿಂದ ಈ ಕುರಿತಾಗಿ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.