alex Certify 6 ಪ್ರಯಾಣಿಕರನ್ನು ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 ಪ್ರಯಾಣಿಕರನ್ನು ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ 6 ಪ್ರಯಾಣಿಕರನ್ನು ಬಿಟ್ಟು ಇಂಡಿಗೋ ವಿಮಾನ ಮಂಗಳೂರಿಗೆ ಹಾರಿದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಇಂಡಿಗೋ 6E 6162 ವಿಮಾನದ ಟಿಕೆಟ್ ಬುಕ್ ಮಾಡಿದ್ದ 6 ಪ್ರಯಾಣಿಕರು ಕೆ.ಐ.ಎದಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದರು. ಆದರೆ ಇಂಡಿಗೋ ವಿಮಾನ ನಿಗದಿತ ಸಮಯಕ್ಕಿಂತ ಮೊದಲೇ ಟೇಕ್ ಆಫ್ ಆಗಿದೆ. ವಿಮಾನ 12 ನಿಮಿಷ ಮೊದಲೇ ಮಂಗಳೂರಿಗೆ ಟೇಕ್ ಆಫ್ ಆಗಿದ್ದು, 6 ಪ್ರಯಾಣಿಕರು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಪರದಾಡುವಂತಾಗಿದೆ.

ಇದರಿಂದ ಪ್ರಯಾಣಿಕರು ಇಂಡಿಗೋ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದು, ಬಳಿಕ ಸಂಸ್ಥೆ ಬೇರೆ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣಿಕರನ್ನು ಕಳುಹಿಸಿಕೊಟ್ಟಿದೆ.

ಸರ್ಕಾರಿ ಅಧಿಕಾರಿಯೂ ಆಗಿರುವ ಪ್ರಯಾಣಿಕರೊಬ್ಬರು ಹೇಳುವ ಪ್ರಕಾರ ಇಂಡಿಗೋ ವಿಮಾನ ಶುಕ್ರವಾರ ಮಧ್ಯಾಹ್ನ 2:55ಕ್ಕೆ ಹೊರಡಬೇಕಿತ್ತು. ಆದರೆ 2:43ಕ್ಕೆ ಟೇಕ್ ಆಫ್ ಆಗಿದೆ. ಮಂಗಳೂರಿಗೆ ತೆರಳಬೇಕಿದ್ದ 6 ಪ್ರಯಾಣಿಕರನ್ನು ಬಿಟ್ಟು ವಿಮಾನ ಹೊರಟಿದೆ. ಇಂಡಿಗೋ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಂಸ್ಥೆ ರಾತ್ರಿ 8:20ಕ್ಕೆ ಹೊರಡುವ ವಿಮಾನದಲ್ಲಿ ತೆರಳಲು ಪ್ರಯಾಣಿಕರಿಗೆ ವ್ಯವಸ್ಥೆ ಮಾಡಿ ಮಂಗಳೂರಿಗೆ ಕಳುಹಿಸಿಕೊಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...