alex Certify BIG NEWS: ವಿಮಾನದಲ್ಲೇ ಪ್ರಯಾಣಿಕ ದುರ್ಮರಣ; ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಮಾನದಲ್ಲೇ ಪ್ರಯಾಣಿಕ ದುರ್ಮರಣ; ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

ಹೈದರಾಬಾದ್: ಹಾರಾಟ ನಡೆಸಿದ್ದ ವಿಮಾನದಲ್ಲಿಯೇ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಜೆಡ್ಡಾದಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಈ ಅವಘಡ ಸಂಭವಿಸಿದೆ.

ಪ್ರಯಾಣಿಕ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನಿಗೆ ಸೂಕ್ತ ಚಿಕಿತ್ಸೆ ನೀಡಿದರೂ ಆತ ಬದುಕುಳಿಯಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ವೈದ್ಯಕೀಯ ತುರ್ತು ಪರಿಸ್ಥಿತಿ ಕಾರಣಕ್ಕೆ ವಿಮಾನವನ್ನು ಕರಾಚಿಯಲ್ಲಿ ಸುದೀರ್ಘ ಕಾಲ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕ ಮೃತಪಟ್ಟಿದ್ದು ದೃಢ ಎಂದು ವೈದ್ಯರು ಘೋಷಿಸಿದ ಬಳಿಕ ಕರಾಚಿಯಿಂದ ಹೈದರಾಬಾದ್ ಗೆ ವಿಮಾನ ಬಂದಿಳಿದಿದೆ ಎಂದು ವಿಮಾನ ಯಾನ ಸಂಸ್ಥೆ ಮಾಹಿತಿ ನೀಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich