alex Certify ಅಪಘಾತದ ವೇಳೆ ಜೀವ ಉಳಿಸಿದ ರಕ್ಷಕರಿಗೆ 5000 ರೂ. ಬಹುಮಾನ, ಪ್ರಮಾಣ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದ ವೇಳೆ ಜೀವ ಉಳಿಸಿದ ರಕ್ಷಕರಿಗೆ 5000 ರೂ. ಬಹುಮಾನ, ಪ್ರಮಾಣ ಪತ್ರ

ಬೆಂಗಳೂರು: ಅಪಘಾತದ ವೇಳೆ ಜೀವ ಉಳಿಸಲು ನೆರವು ನೀಡುವ ಜೀವರಕ್ಷಕರಿಗೆ 5000 ರೂಪಾಯಿ ಬಹುಮಾನ ಮತ್ತು ಪ್ರಮಾಣಪತ್ರ ನೀಡುವ ಕುರಿತಂತೆ ಸರ್ಕಾರ ಕ್ರಮಕೈಗೊಂಡಿದೆ.

ಜೀವ ರಕ್ಷಕರಿಗೆ 5 ಸಾವಿರ ರೂ. ಬಹುಮಾನ ಮತ್ತು ಪ್ರಮಾಣಪತ್ರ ನೀಡಲು ಆಯ್ಕೆ ಮಾಡುವ ಕುರಿತಂತೆ ರಾಜ್ಯ ಮಟ್ಟದಲ್ಲಿ ಯೋಜನೆಯ ಪರಿಶೀಲನಾ ಸಮಿತಿ ಮತ್ತು ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಾಗಿ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಿರುತ್ತಾರೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಸಂಚಾರ ಮತ್ತು ರಸ್ತೆ ಸುರಕ್ಷತೆ ಆಯುಕ್ತರು, ಆರೋಗ್ಯ ಇಲಾಖೆ ಆಯುಕ್ತರು ಸದಸ್ಯರಾಗಿರುತ್ತಾರೆ.

ಜಿಲ್ಲಾ ಮಟ್ಟದ ಸಮಿತಿಯಲ್ಲಿ ಜಿಲ್ಲಾ ಸಮಿತಿ ಅಧಿಕಾರಿಗಳಿರುತ್ತಾರೆ. ಅಪಘಾತದ ವೇಳೆ ಜೀವ ಉಳಿಸಿದ ಜೀವ ರಕ್ಷಕರನ್ನು ಆಯ್ಕೆ ಮಾಡಿ ಅವರಿಗೆ 5 ಸಾವಿರ ರೂ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಬಹುಮಾನದ ಮೊತ್ತವನ್ನು ನೇರವಾಗಿ ಜೀವರಕ್ಷಕರ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...