alex Certify BREAKING : ತೀವ್ರಗೊಂಡ ‘ಕಾವೇರಿ ‘ಕಿಚ್ಚು : ಕರವೇ ರಾಜ್ಯಾಧ್ಯಕ್ಷ ‘ಪ್ರವೀಣ್ ಶೆಟ್ಟಿ’ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೀವ್ರಗೊಂಡ ‘ಕಾವೇರಿ ‘ಕಿಚ್ಚು : ಕರವೇ ರಾಜ್ಯಾಧ್ಯಕ್ಷ ‘ಪ್ರವೀಣ್ ಶೆಟ್ಟಿ’ ಪೊಲೀಸ್ ವಶಕ್ಕೆ

ಬೆಂಗಳೂರು : ಕಾವೇರಿಗಾಗಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ರಾಜ್ಯದ ವಿವಿಧೆಡೆ ಪ್ರತಿಭಟನೆ ಜೋರಾಗಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಆರ್ ಟಿ ನಗರದ ಖಾಸಗಿ ಹೋಟೆಲ್ ಮುಂದೆ ಬಿಎಂಟಿಸಿ ಬಸ್ ನಲ್ಲಿ ಪ್ರವೀಣ್ ಶೆಟ್ಟಿ ಮತ್ತಿತರರನ್ನು ಪೊಲೀಸರು ತುಂಬಿಸಿಕೊಂಡು ಹೋಗಿದ್ದಾರೆ.

ಬೆಂಗಳೂರು ನಗರದಾದ್ಯಂತ ನಿನ್ನೆ ಮಧ್ಯರಾತ್ರಿ 12 ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆ  ಜಾರಿಗೊಳಿಸಲಾಗಿದ್ದು, ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಮತ್ತೊಂದೆಡೆ ಜಿಲ್ಲೆ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...