alex Certify ಹಡಗು – ದೋಣಿ ನಡುವೆ ಭೀಕರ ಅಪಘಾತ: ಕನಿಷ್ಟ 25 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಡಗು – ದೋಣಿ ನಡುವೆ ಭೀಕರ ಅಪಘಾತ: ಕನಿಷ್ಟ 25 ಮಂದಿ ಸಾವು

ಎರಡು ದೋಣಿಗಳ ನಡುವೆ ಘರ್ಷಣೆ ಉಂಟಾದ ಪರಿಣಾಮ ಕನಿಷ್ಟ 25 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಮಧ್ಯ ಬಾಂಗ್ಲಾದೇಶದಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾವು ಐವರನ್ನ ರಕ್ಷಣೆ ಮಾಡಿದ್ದು 25 ಮೃತದೇಹಗಳನ್ನ ಪತ್ತೆ ಮಾಡಲಾಗಿದೆ ಎಂದು ಸ್ಥಳೀಯ ಪೊಲೀಸ್​ ಇಲಾಖೆ ಮುಖ್ಯಸ್ಥ ಮಿರಾಜ್​ ಹುಸೇನ್​​ ಹೇಳಿದ್ದಾರೆ.
ಶಿಬ್ಬಾರ್​ ಪಟ್ಟಣದ ಸಮೀಪವಿರುವ ಪದ್ಮಾ ನದಿಯಲ್ಲಿ ಕನಿಷ್ಟ 30 ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದ್ದ ದೋಣಿಯು ಮರಳು ಸಾಗಿಸುತ್ತಿದ್ದ ಹಡಗಿಗೆ ಡಿಕ್ಕಿ ಹೊಡೆದಿದೆ. ದೋಣಿಯಲ್ಲಿ ಎಷ್ಟು ಮಂದಿ ಇದ್ದರು ಅನ್ನೋದ್ರ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹೀಗಾಗಿ ಪೊಲೀಸರು ರಕ್ಷಣಾ ಕಾರ್ಯವನ್ನ ಮುಂದುವರಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಈ ರೀತಿಯ ಅಪಘಾತಗಳು ಸಾಮಾನ್ಯವಾಗಿದೆ. ಕಳಪೆ ನಿರ್ವಹಣೆ ಹಾಗೂ ಹಡಗು ಮಾರ್ಗದಲ್ಲಿ ಸುರಕ್ಷಿತ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳದೇ ಇರೋದು ಈ ಎಲ್ಲಾ ದುರಂತಗಳಿಗೆ ಕಾರಣವಾಗಿದೆ.

ಏಪ್ರಿಲ್​ ತಿಂಗಳ ಆರಂಭದಲ್ಲೂ ಸಹ 50 ಪ್ರಯಾಣಿಕರನ್ನ ಹೊಂದಿದ್ದ ದೋಣಿಯು ಸರಕು ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ 30ಕ್ಕೂ ಹೆಚ್ಚು ಮಂದಿ ದಾರುಣವಾಗಿ ಮೃತಪಟ್ಟಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...