alex Certify ಬಿಗ್ ನ್ಯೂಸ್: ಬಡತನದ ಕುರಿತು ಬೆಚ್ಚಿಬೀಳಿಸುವ ಸಂಗತಿಯನ್ನು ಬಿಚ್ಚಿಟ್ಟಿದೆ ವಿಶ್ವಬ್ಯಾಂಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಬಡತನದ ಕುರಿತು ಬೆಚ್ಚಿಬೀಳಿಸುವ ಸಂಗತಿಯನ್ನು ಬಿಚ್ಚಿಟ್ಟಿದೆ ವಿಶ್ವಬ್ಯಾಂಕ್

ಕೊರೊನಾ ವೈರಸ್ ಪರಿಣಾಮ ಮತ್ತು ದುರ್ಬಲ ಆರ್ಥಿಕತೆಯಿಂದಾಗಿ  60 ದಶಲಕ್ಷಕ್ಕೂ ಹೆಚ್ಚು ಜನರು ಬಡತನ ರೇಖೆ ಕೆಳಗೆ ಬರಲಿದ್ದಾರೆಂದು ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಹೇಳಿದ್ದಾರೆ. ಈ ಜನರ ದಿನ ಆದಾಯ ಕೇವಲ 142 ರೂಪಾಯಿಯಾಗಲಿದೆ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ  ಬಡತನ ತೊಲಗಿಸಲು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿತ್ತು. ಆದ್ರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಇದು ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ಇದು ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಕಾರಣವಾಗಲಿದೆ ಎಂದಿದ್ದಾರೆ.

ಸಾಂಕ್ರಾಮಿಕ ರೋಗದ ಈ ಹಂತದಲ್ಲಿ ವಿಶ್ವಬ್ಯಾಂಕ್ ತ್ವರಿತ ಕ್ರಮಗಳನ್ನು ಕೈಗೊಂಡಿದೆ ಮತ್ತು 100 ದೇಶಗಳಲ್ಲಿ ತುರ್ತು ಸಹಾಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಡೇವಿಡ್ ಮಾಲ್ಪೋಸ್ ಹೇಳುತ್ತಾರೆ. ಈ ದೇಶಗಳಿಗೆ 15 ತಿಂಗಳಲ್ಲಿ 160 ಬಿಲಿಯನ್ ಡಾಲರ್ ಮೊತ್ತವನ್ನು ನೀಡಲಾಗುವುದು ಎಂದವರು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...