alex Certify BIG NEWS: ಸಂಸದ ಡಿ.ಕೆ.ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ನಿವಾಸದ ಮೇಲೆ ಐಟಿ ದಾಳಿ; ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಸದ ಡಿ.ಕೆ.ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ನಿವಾಸದ ಮೇಲೆ ಐಟಿ ದಾಳಿ; ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಆಪ್ತ ಮಾಜಿ ಕಾರ್ಪೊರೇಟರ್ ಗಂಗಾಧರ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಕೋಣನಕುಂಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ.

ಕಾಂಗ್ರೆಸ್ ನಾಯಕರ ಮನೆ ಮೇಲಿನ ಐಟಿ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಡಿ.ಕೆ ಸುರೇಶ್ ಅವರನ್ನು ಟಾರ್ಗೆಟ್ ಮಾಡಿ ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿ ನಡೆಸಲಾಗಿದ್ದು, ಇದು ಡಿ.ಕೆ.ಸುರೇಶ್ ಅವರನ್ನು ಕಟ್ಟಿಹಾಕುವ ಯತ್ನ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಗಂಗಾಧರ್ ಹಾಗೂ ಶ್ರೀಧರ್ ನಿವಾಸದ ಬಳಿ ಜಮಾವಣೆಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಐಟಿ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಕಕಾಲದಲ್ಲಿ ಒಟ್ಟು 6 ಕಡೆ 10ಕ್ಕೂ ಹೆಚ್ಚಿ ಐಟಿ ಅಧಿಕರಿಗಳ ತಂಡ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...