alex Certify ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ.

“ಮೇಕೆದಾಟು ಅಣೆಕಟ್ಟೆ ನಿರ್ಮಿಸುವ ತನ್ನ ಯೋಜನೆಯನ್ನು ಕರ್ನಾಟಕ ಸರ್ಕಾರ ಕೈಬಿಡಬೇಕೆಂದು ನಾವು ಆಗ್ರಹಿಸುತ್ತೇವೆ. ಈ ಯೋಜನೆ ಮುಂದುವರೆಸಲು ಸರ್ಕಾರಕ್ಕೆ ಸೂಚಿಸಿರುವ ವಿರೋಧ ಪಕ್ಷಗಳನ್ನು ನಾವು ವಿರೋಧಿಸುತ್ತೇವೆ. ನಾವು ಈ ನಿರ್ಮಾಣವಾಗಲು ಬಿಡುವುದಿಲ್ಲ” ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ತಿಳಿಸಿದ್ಧಾರೆ.

ಬೈಕ್‌ ಮೇಲೆ ರೋಮ್ಯಾನ್ಸ್:‌ ಯುವ ಜೋಡಿಗೆ ಹಿಗ್ಗಾಮುಗ್ಗಾ ತರಾಟೆ

ಕರ್ನಾಟಕದಲ್ಲೂ ಬಿಜೆಪಿ ಸರ್ಕಾರವಿದ್ದು, ಅಣೆಕಟ್ಟೆ ನಿರ್ಮಿಸಲು ಮುಂದಾಗುವ ಬಗ್ಗೆ ಮಾತನ್ನಾಡುತ್ತಿದ್ದರೆ ಅತ್ತ ತಮಿಳುನಾಡಿನ ಬಿಜೆಪಿ ಘಟಕ ಈ ನಡೆಯನ್ನು ವಿರೋಧಿಸುತ್ತಿರುವುದು ಅನೇಕರ ಹುಬ್ಬೇರಿಸಿದೆ.

ಯಾವುದೇ ಕಾರಣಕ್ಕೂ ಮೇಕೆದಾಟು ಅಣೆಕಟ್ಟು ನಿರ್ಮಾಣದ ವಿಚಾರವಾಗಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ಸುಮ್ಮನೇ ವಿರೋಧ ಮಾಡಬೇಕೆಂದು ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...