alex Certify ಸ್ಕಿಡ್ ಆಗಿ ಕಣಿವೆಗೆ ಉರುಳಿದ ವಾಹನ: 8 ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಕಿಡ್ ಆಗಿ ಕಣಿವೆಗೆ ಉರುಳಿದ ವಾಹನ: 8 ಮಂದಿ ದುರ್ಮರಣ

ಕಿಶ್ತ್ವಾರ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಕಣಿವೆಗೆ ಉರುಳಿದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಕಿಶ್ತ್ವಾರ್ ಉಪ ಆಯುಕ್ತ(ಡಿಸಿ) ದೇವಾಂಶ್ ಯಾದವ್ ಹೇಳಿದ್ದಾರೆ.

ಓರ್ವ ಬಾಲಕಿ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳ ಬಗ್ಗೆ ವೈದ್ಯಕೀಯ ತಂಡ ಪರಿಶೀಲನೆ ನಡೆಸುತ್ತಿದೆ. ನಾವು ಅಗತ್ಯ ಪರಿಹಾರ ಕ್ರಮಕೈಗೊಂಡಿದ್ದು, ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಭರಿಸುತ್ತೇವೆ ಎಂದು ಯಾದವ್ ಹೇಳಿದರು.

ಕಿಶ್ತ್ವಾರ್‌ನ ಚತ್ರೂವಿನ ಬುಂಡಾ ಪ್ರದೇಶದಲ್ಲಿ ಅವರ ಕಾರ್ ಕಮರಿಗೆ ಬಿದ್ದಿದ್ದರಿಂದ 7 ಜನ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಒಬ್ಬರು ಜಿಲ್ಲಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...