alex Certify BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧಾರ..? ಬೊಮ್ಮಾಯಿ ಸಂಪುಟ ಸೇರದಿರಲು ತೀರ್ಮಾನ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧಾರ..? ಬೊಮ್ಮಾಯಿ ಸಂಪುಟ ಸೇರದಿರಲು ತೀರ್ಮಾನ..?

ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಜಗದೀಶ್ ಶೆಟ್ಟರ್ ತೀರ್ಮಾನ ಕೈಗೊಂಡಿದ್ದಾರೆ.

ಈ ಬಗ್ಗೆ ಅವರು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಸಚಿವ ಸ್ಥಾನ ಬೇಡವೆಂದು ಜಗದೀಶ್ ಶೆಟ್ಟರ್ ಹೇಳಿದ್ದು. ಕಿರಿಯರಿಗೆ ಸಚಿವ ಸ್ಥಾನ ಕೊಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಆಗಿದ್ದರೂ ಬಿ.ಎಸ್.ವೈ. ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶೆಟ್ಟರ್ ಅವರು ಸಿಎಂ ಬದಲಾದ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರದಿರಲು ತೀರ್ಮಾನಿಸಿದ್ದಾರೆ. ಹಿಂದೆ ಬಸವರಾಜ ಬೊಮ್ಮಾಯಿ ಅವರು ಜಗದೀಶ್ ಶೆಟ್ಟರ್ ಎದುರು ಪರಾಭವಗೊಂಡಿದ್ದರು. ಈಗ ಸಂಪುಟಕ್ಕೆ ಸೇರದೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಶೆಟ್ಟರ್ ಚಿಂತಿಸಿದ್ದು, ಶೀಘ್ರವೇ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...