alex Certify ಬಿಜೆಪಿಗೆ ಮಾಜಿ ಸಿಎಂ ಶೆಟ್ಟರ್ ಶಾಕ್: ಬಿ.ಎಸ್.ವೈ. ಸಂಬಂಧಿ ಕಾಂಗ್ರೆಸ್ ಸೇರ್ಪಡೆ ಶೀಘ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಮಾಜಿ ಸಿಎಂ ಶೆಟ್ಟರ್ ಶಾಕ್: ಬಿ.ಎಸ್.ವೈ. ಸಂಬಂಧಿ ಕಾಂಗ್ರೆಸ್ ಸೇರ್ಪಡೆ ಶೀಘ್ರ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಉದ್ದೇಶದಿಂದ ಕಾಂಗ್ರೆಸ್ ಆಪರೇಷನ್ ಹಸ್ತ ಚುರುಕುಗೊಳಿಸಿದೆ.

ಬಿಜೆಪಿ, ಜೆಡಿಎಸ್ ಮುಖಂಡರಿಗೆ ಗಾಳ ಹಾಕತೊಡಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಪರೇಷನ್ ಹಸ್ತ ಮೂಲಕ ಹಲವಾರು ಮಾಜಿ ಶಾಸಕರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇತ್ತೀಚೆಗೆ ರಾಮಣ್ಣ ಲಮಾಣಿ ಸೇರಿದಂತೆ ಹಲವು ಮಾಜಿ ಶಾಸಕರು, ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಈಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಬಂಧಿ, ಮಾಜಿ ಶಾಸಕ ಚಿಕ್ಕನಗೌಡರ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಚಿಕ್ಕನಗೌಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಸಿದ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದು, ಅವರು ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕನಗೌಡರ್ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಶೆಟ್ಟರ್ ಮಾತುಕತೆ ನಂತರ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
6 gode ideer til at glæde en Hvem er fra fremtiden: Kun folk Kun de Sådan holder du din non-stick stegepande Kun personer med skarpskyttesyn kan opspore tyven: et