alex Certify BIG NEWS: ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ತಮ್ಮ ವಿರುದ್ಧ ಅಪಪ್ರಚಾರದ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ ಜಗ್ಗೇಶ್ ಬಗ್ಗೆ ಅಪಪ್ರಚಾರದ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ಯಾವುದೇ ಅವಹೇಳನಕಾರಿ ಸುದ್ದಿ ಪ್ರಕಟ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಪ್ರಾಮಾಣಿಕರಿಸದ ಸುದ್ದಿಗಳನ್ನು ಪ್ರಕಟಿಸುವಂತಿಲ್ಲ. ಮಾನಹಾನಿಯಾಗುವ ರೀತಿಯಲ್ಲಿ, ಅವಹೇಳನವಾಗುವ ರೀತಿಯಲ್ಲಿ ಯಾವುದೇ ಸುದ್ದಿ ಪ್ರಕಟಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದ್ದು, ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಜಗ್ಗೇಶ್ ಪರ ವಕೀಲರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...