alex Certify ಜೈಲಿನಲ್ಲಿ ನಟ ದರ್ಶನ್ ಗೆ ವಿಶೇಷ ಆತಿಥ್ಯ: ಫೋಟೋ, ವಿಡಿಯೋ ಬಹಿರಂಗ ಬೆನ್ನಲ್ಲೇ ತನಿಖೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲಿನಲ್ಲಿ ನಟ ದರ್ಶನ್ ಗೆ ವಿಶೇಷ ಆತಿಥ್ಯ: ಫೋಟೋ, ವಿಡಿಯೋ ಬಹಿರಂಗ ಬೆನ್ನಲ್ಲೇ ತನಿಖೆ ಆರಂಭ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗಿದೆ.

ಜೈಲಿನಲ್ಲಿ ದರ್ಶನ್ ಸಹಚರರೊಂದಿಗೆ ಕುರ್ಚಿ ಮೇಲೆ ಕುಳಿತು ಕಾಫಿ ಕುಡಿಯುತ್ತಾ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ದರ್ಶನ್ ಸಹ ಕೈದಿಯೊಬ್ಬರ ಮೊಬೈಲ್ ನಿಂದ ಆಪ್ತನಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಕೂಡ ಬಹಿರಂಗವಾಗಿದೆ.

ಜೈಲಿನಲ್ಲಿ ದರ್ಶನ್ ತಲೆ ಬೋಳಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಬಹಿರಂಗವಾಗಿರುವ ವಿಡಿಯೋ, ಫೋಟೋದಲ್ಲಿ ದರ್ಶನ್ ವಿಗ್ ಧರಿಸಿಲ್ಲ. ತಲೆಯ ಕೂದಲು ಚಿಕ್ಕದಾಗಿದೆ. ಕಳೆದ 66 ದಿನಗಳಿಂದ ಜೈಲಿನಲ್ಲಿರುವ ದರ್ಶನ್ ಬ್ಯಾರಕ್ ಕೊರಗೆ ಕುರ್ಚಿಯಲ್ಲಿ ಕುಳಿತು ಸಿಗರೇಟ್ ಸೇದಿದ್ದಾರೆ.

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ದರ್ಶನ್ ಮ್ಯಾನೇಜರ್ ನಾಗರಾಜ್ ಮತ್ತು ಆರೋಪಿ ಕುಳ್ಳ ಸೀನಾ ಜೊತೆಯಲ್ಲಿ ಕುಳಿತು ಹರಟೆ ಹೊಡೆಯುತ್ತಿರುವ ಫೋಟೋ ಹರಿದಾಡಿದೆ. ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನುವ ಫೋಟೋ ಬಹಿರಂಗವಾದ ಬೆನ್ನಲ್ಲೇ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಗಳು ಭಾನುವಾರ ಸಂಜೆಯೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...