alex Certify ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

ಗದಗ: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಅಮಾನತುಗೊಂಡ ಜೈಲು ವಾರ್ಡನ್ ಸೇರಿದಂತೆ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಅಮಾನತಾಗಿರುವ ಬಂಧಿಖಾಕಾನೆ ಇಲಾಖೆ ನೌಕರ ಶ್ರೀಕಾಂತ ಗುಡದೂರ, ಆತನ ಸಹಚರರಾದ ಪ್ರಸಾದ ಸಿಳ್ಳಿಕೇತರ, ಗುರುಪ್ರಸಾದ ಸಿಳ್ಳಿಕೇತರ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗದಗ, ಹಾವೇರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಯ ಹಲವು ದೇವಾಲಯಗಳಲ್ಲಿ ಕಳವು ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು, ಹರಪನಹಳ್ಳಿ, ಶಿವಮೊಗ್ಗ ಜಿಲ್ಲೆಯ ಆನವಟ್ಟಿ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದ ಸರಗಳ್ಳತನ ಪ್ರಕರಣಗಳಲ್ಲಿಯೂ ಈ ತಂಡ ಭಾಗಿಯಾಗಿರುವುದು ವಿಚಾರಣೆ ಸಂದರ್ಭದಲ್ಲಿ ಗೊತ್ತಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...