alex Certify ಜನಸಾಮಾನ್ಯರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯನ್ನು(ಪಿಎಂಬಿಜೆಪಿ) ರೂಪಿಸಲಾಗಿದ್ದು, ವೈದ್ಯರು ಜನೌಷಧಿಯನ್ನೇ ಶಿಫಾರಸು ಮಾಡಿ ಔಷಧ ಚೀಟಿ ಬರೆದುಕೊಡುವಂತೆ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ  ಡಿ.ವಿ. ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.

ಇಂದಿನಿಂದ ದೇಶಾದ್ಯಂತ ಆರಂಭಗೊಂಡ ಜನೌಷಧಿ ಸಪ್ತಾಹದ ಸಂದರ್ಭದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಸಚಿವರು, ಜನೌಷಧಿಯನ್ನೇ ಶಿಫಾರಸು ಮಾಡುವುದರಿಂದ ಜನಸಾಮಾನ್ಯರಿಗೆ ದೊಡ್ಡಪ್ರಮಾಣದಲ್ಲಿ ಹಣ ಉಳಿತಾಯವಾಗಲಿದೆ ಎಂದರು.

ರಾಸಾಯನಿಕ ಇಲಾಖೆ ಅಧಿನದ ಬಿಪಿಪಿಐ ಸಂಸ್ಥೆಯು ಪಿಎಂಬಿಜೆಪಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ದೇಶದ 734 ಜಿಲ್ಲೆಗಳಲ್ಲಿ ಈಗಾಗಲೇ 7500 ಕ್ಕಿಂತ ಹೆಚ್ಚು ಜನೌಷಧಿ ಕೇಂದ್ರಗಳನ್ನು ತೆರೆದಿದೆ. ಜನೌಷಧಿ ಮಳಿಗೆಗಳ ಮೂಲಕ ಸದ್ಯ 745 ನಮೂನೆ ಔಷಧಗಳು ಹಾಗೂ 117 ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಮಾರಾಟ ಮಾಡಲಾಗುತ್ತಿದೆ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಸಿಗುವ ಔಷಧಕ್ಕೂ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಕಂಪನಿಗಳ ಬ್ರಾಂಡ್ ನಲ್ಲಿ ಔಷಧವನ್ನು ಮಾರಾಟ ಮಾಡಲಾಗುತ್ತಿದೆ. ಆದರೆ, ಜನೌಷಧ ಅಂಗಡಿಗಳಲ್ಲಿ ಮೂಲ ರಾಸಾಯನಿಕದ ಹೆಸರಿನಲ್ಲಿಯೇ ಔಷಧ ಮಾರಾಟ ಮಾಡಲಾಗುತ್ತಿದೆ.

ಜನೌಷಧಿಯ ದರ ಶೇಕಡ 10 ರಿಂದ ಶೇಕಡಾ 90 ರಷ್ಟು ಕಡಿಮೆಯಾಗಿದೆ. “ಜನೌಷಧಿ ಸಪ್ತಾಹದ” ಅಂಗವಾಗಿ ದೇಶಾದ್ಯಂತ ಇಂದು 1,000 ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ಜನೌಷಧಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಒಂದು ವಾರಕಾಲ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕೊನೆಯದಿನ ಅಂದರೆ ಮಾರ್ಚ್ 7 ರಂದು ಪ್ರಧಾನಿ ನರೇಂದ್ರ ಮೋದಿ ಜನೌಷಧಿ ಅಂಗಡಿ ಮಾಲಿಕರು ಹಾಗೂ ಫಲಾನುಭವಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ದೆಹಲಿಯಲ್ಲಿ ಅಂದು ಸಚಿವ ಸದಾನಂದ ಗೌಡರು ಜನೌಷಧಿ ವಲಯದ ಸಾಧಕರಿಗೆ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ಜನೌಷಧಿಯ ದರ ಕಡಿಮೆ ಎಂದಾಕ್ಷಣ ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ. ಔಷಧ ಗುಣಮಟ್ಟದ ಎಲ್ಲ ಮಾನದಂಡಗಳೂ ಜನೌಷಧಗಳಿಗೆ ಅನ್ವಯವಾಗುತ್ತದೆ. ಕಳೆದ ಸಾಲಿನಲ್ಲಿ (2019-20) 433.6 ಕೋಟಿ ರೂಪಾಯಿ ಜನೌಷಧ ಮಾರಾಟ ಮಾಡಲಾಗಿತ್ತು. ಇದರಿಂದ ಜನರಿಗೆ ಸುಮಾರು 2500 ಕೋಟಿ ರೂಪಾಯಿ ಉಳಿತಾಯವಾಗಿತ್ತು. ಪ್ರಸಕ್ತ ಸಾಲಿನಲ್ಲಿ ನಿನ್ನೆವರೆಗೆ 586.5 ಕೋಟಿ ರೂ ಮೌಲ್ಯದ (ಎಂಆರ್ಪಿ) ಜನೌಷಧ ಮಾರಾಟವಾಗಿದೆ. ಇದರಿಂದ ಜನರಿಗೆ ಕನಿಷ್ಠವೆಂದರೂ 3500 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಸದಾನಂದ ಗೌಡ ವಿವರಿಸಿದ್ದಾರೆ.

ಜನೌಷಧಿ ಅಂಗಡಿಗಳ ಮೂಲಕ ಮಹಿಳೆಯರ ಅನುಕೂಲಕ್ಕಾಗಿ ಕೇವಲ ಒಂದು ರೂಪಾಯಿಗೆ ‘ಸುವಿಧಾ’ ಹೆಸರಿನ ಸ್ಯಾನಿಟರಿ ಪ್ಯಾಡ್ ಮಾರಾಟ ಮಾಡಲಾಗುತ್ತಿದೆ (ಬ್ರಾಂಡೆಡ್ ಸ್ಯಾನಿಟರಿ ಪ್ಯಾಡ್ ಬೆಲೆ 4ರಿಂದ 5 ರೂಪಾಯಿ). ಈ ವರ್ಷ 10.76 ಕೋಟಿ ಸುವಿಧಾ ಸ್ಯಾನಿಟರಿ ಪ್ಯಾಡ್ಗಳನ್ನು ಮಾರಾಟ ಮಾಡಲಾಗಿದೆ. ಕರ್ನಾಟಕದಲ್ಲಿ 92.8 ಲಕ್ಷ ಸುವಿಧಾ ಪ್ಯಾಡ್ ಗಳನ್ನು ಮಾರಾಟ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kolik čokolády je příliš mnoho: Maximální denní dávka 10 nečekaných potravin, které musíte vyhodit z lednice – seznam Rychlé hubnutí za týden: Tajemství a jednoduché rady Muži utrpěl Jak správně péct džíny: Tipy generálního ředitele společnosti Levi's Jak udělat starou a mastnou pánev Dermatolog pojmenoval levné produkty, které skvěle obnovují a Snídaně pro lenochy: rychlé a chutné recepty 6 důvodů, Jak rychle se