alex Certify BIG NEWS: ಆಗಸ್ಟ್ 28 ರಿಂದ ಬಿಜೆಪಿ ಸರ್ಕಾರದ ಜನೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಗಸ್ಟ್ 28 ರಿಂದ ಬಿಜೆಪಿ ಸರ್ಕಾರದ ಜನೋತ್ಸವ

ಬೆಂಗಳೂರು: ಆಗಸ್ಟ್ 28 ರಿಂದ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಗಸ್ಟ್ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಸಲಾಗುವುದು.

ನಂತರ ಇತರೆಡೆ ಸಮಾವೇಶ ಕೈಗೊಳ್ಳಲಿದ್ದು, ಸಿದ್ದರಾಮೋತ್ಸವ ನಡೆದ ದಾವಣಗೆರೆಯಲ್ಲಿ ಸಮಾರೋಪ ಸಮಾರಂಭ ನಡೆಸುವ ಸಾಧ್ಯತೆ ಇದೆ. ಜುಲೈ 28 ರಂದು ದೊಡ್ಡಬಳ್ಳಾಪುರದಲ್ಲಿ ನಿಗದಿಯಾಗಿದ್ದ ಜನೋತ್ಸವ ಸಮಾವೇಶವನ್ನು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ರದ್ದು ಮಾಡಲಾಗಿತ್ತು. ಮತ್ತೆ ಜನೋತ್ಸವ ಆಚರಿಸಲು ತೀರ್ಮಾನಿಸಲಾಗಿದ್ದು, ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ ಮೊದಲ ರ್ಯಾಲಿ ನಡೆಯಲಿದೆ. ನಂತರ ಐದಾರು ಕಡೆಗಳಲ್ಲಿ ಸಮಾವೇಶ ನಡೆಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...