alex Certify ಮಧ್ಯಪ್ರದೇಶದಲ್ಲಿ ನೆಹರೂ ಪ್ರತಿಮೆ ಭಗ್ನಗೊಳಿಸಿದ ದುಷ್ಕರ್ಮಿಗಳು ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯಪ್ರದೇಶದಲ್ಲಿ ನೆಹರೂ ಪ್ರತಿಮೆ ಭಗ್ನಗೊಳಿಸಿದ ದುಷ್ಕರ್ಮಿಗಳು ಅಂದರ್

ಮಧ್ಯಪ್ರದೇಶದ ಸಂತಾದಲ್ಲಿ ಜವಾಹರ ಲಾಲ್ ನೆಹರೂ ಪ್ರತಿಮೆಯನ್ನು ಭಗ್ನಗೊಳಿಸಲಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿದೆ.
ಸುಮಾರು 12 ಮಂದಿ ದುಷ್ಕರ್ಮಿಗಳು ಪ್ರತಿಮೆಯನ್ನು ಸುತ್ತಿಗೆಯಿಂದ ಹೊಡೆಯುತ್ತಾ ಪ್ರತಿಮೆಯನ್ನು ಭಗ್ನಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.‌

ಜಿಲ್ಲಾಧಿಕಾರಿಗಳ ಕಚೇರಿಗೆ ಸುಮಾರು 50 ಮೀಟರ್ ದೂರದಲ್ಲಿರುವ ಧಾವರಿ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಕೇಸರಿ ಬಾವುಟಗಳನ್ನು ಹಿಡಿದಿದ್ದ ದುಷ್ಕರ್ಮಿಗಳು ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದು, ನೆಹರೂ ಪ್ರತಿಮೆಯನ್ನು ಭಗ್ನಗೊಳಿಸಲು ಪ್ರಯತ್ನಿಸುವ ಮೂಲಕ ಸಮಾಜದಲ್ಲಿ ಕ್ಲೇಷ ಪರಿಸ್ಥಿತಿಯನ್ನು ಉಂಟು ಮಾಡುವ ದುರುದ್ದೇಶ ಹೊಂದಿದ ಆರೋಪದ ಮೇಲೆ ಅನಾಮಧೇಯ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

— Anurag Dwary (@Anurag_Dwary) May 25, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...