alex Certify BREAKING NEWS: ಚಾಕುವಿನಿಂದ ಇರಿದು ಯೋಧನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚಾಕುವಿನಿಂದ ಇರಿದು ಯೋಧನ ಬರ್ಬರ ಹತ್ಯೆ

ಬಾಗಲಕೋಟೆ: ಚಾಕುವಿನಿಂದ ಇರಿದು ಯೋಧನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ಬಾಮೈದನಿಂದಲೇ ಭಾವ ಕರಿಸಿದ್ದಪ್ಪ ಕಳಸದ(25) ಅವರನ್ನು ಕೊಲೆ ಮಾಡಲಾಗಿದೆ. ರಜೆ ಮೇಲೆ ಊರಿಗೆ ಬಂದಿದ್ದಾಗ ಯೋಧ ಕರಿಸಿದ್ದಪ್ಪನ ಹತ್ಯೆ ಮಾಡಲಾಗಿದೆ.

ಊಟ ನೀಡುವ ವಿಚಾರವಾಗಿ ದಂಪತಿ ಜಗಳ ಮಾಡಿಕೊಂಡಿದ್ದರು. ಗಲಾಟೆಯ ನಂತರ ಯೋಧನ ಪತ್ನಿ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ನನ್ನ ಸಹೋದರಿಗೆ ಕಿರುಕುಳ ಕೊಡುತ್ತೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದ ಭಾಮೈದ ಧರಿಗೌಡ ಧೂಳಪ್ಪ ಯೋಧನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಎರಡು ವರ್ಷದ ಹಿಂದೆ ಯೋಧ ಕರಿಸಿದ್ಧಪ್ಪ, ವಿದ್ಯಾ ಪ್ರೀತಿಸಿ ಮದುವೆಯಾಗಿದ್ದರು. ನಾಲ್ಕು ದಿನದ ಹಿಂದೆ ರಜೆಯ ಮೇಲೆ ಯೋಧ ಊರಿಗೆ ಬಂದಿದ್ದರು. ಘಟನಾ ಸ್ಥಳಕ್ಕೆ ಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...