alex Certify JDS ಸೇರ್ಪಡೆಯಾಗಲಿದ್ದಾರಾ ಜನಾರ್ದನ ರೆಡ್ಡಿ ? ಕುತೂಹಲ ಕೆರಳಿಸಿದ ಮುಂದಿನ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JDS ಸೇರ್ಪಡೆಯಾಗಲಿದ್ದಾರಾ ಜನಾರ್ದನ ರೆಡ್ಡಿ ? ಕುತೂಹಲ ಕೆರಳಿಸಿದ ಮುಂದಿನ ನಡೆ

ಮಾಜಿ ಸಚಿವ ಜನಾರ್ದನ ರೆಡ್ಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕಣಕ್ಕಿಳಿಯುವುದಾಗಿ ಈಗಾಗಲೇ ಪ್ರಕಟಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಜನಾರ್ದನ ರೆಡ್ಡಿಯವರ ವಿಷಯದಲ್ಲಿ ಈವರೆಗೆ ಯಾವುದೇ ತೀರ್ಮಾನ ಕೈಗೊಳ್ಳದಿರುವುದು ಅವರಿಗೆ ಬೇಸರವನ್ನುಂಟು ಮಾಡಿದೆ.

ಹೀಗಾಗಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದರ ಮಧ್ಯೆ ಗುರುವಾರದಂದು ಮಾನ್ವಿಯ ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿರುವ ಜನಾರ್ದನ ರೆಡ್ಡಿಯವರ ನೂತನ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಈ ಭೇಟಿ ಕುರಿತಂತೆ ಪ್ರತಿಕ್ರಿಯಿಸಿದ್ದ ರಾಜಾ ವೆಂಕಟಪ್ಪ ನಾಯಕ ಸಂಬಂಧಿಕರ ಮದುವೆ ಲಗ್ನ ಪತ್ರಿಕೆ ನೀಡಲು ಬಂದಿದ್ದೆ. ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ ಎಂದು ಹೇಳಿದರಾದರೂ ಈ ಭೇಟಿ ಅನೇಕ ಊಹಾಪೋಹಗಳಿಗೆ ಕಾರಣವಾಗಿರುವುದಂತೂ ಸುಳ್ಳಲ್ಲ.

ಇದರ ಮಧ್ಯೆ ಡಿಸೆಂಬರ್ 25ರ ಭಾನುವಾರದಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಹೇಳುವ ಮೂಲಕ ಜನಾರ್ಧನ ರೆಡ್ಡಿಯವರು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದು, ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಅಂದೇ ಬಹಿರಂಗಪಡಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...