alex Certify ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುಗುವುದಾಗಿ ಘೋಷಿಸಿದ್ದಾರೆ.

ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕಣದಿಂದ ಹಿಂದೆ ಸರಿದಿರುವುದಾಗಿ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಸೋಮವಾರ ಘೋಷಿಸಿದ್ದಾರೆ.

ನಾನು ಜೆಡಿಎಸ್ ಪಕ್ಷವನ್ನು ತೊರೆದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ವೈಯಕ್ತಿಕವಾಗಿ ಕಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ ಅವರು, ಕಣದಿಂದ ಸೈಯದ್ ಜಾಕಿರ್ ಹಿಂದೆ ಸರಿದಿರುವುದು ಅವರ ವೈಯಕ್ತಿಕ ತೀರ್ಮಾನವಾಗಿದೆ. ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ. ಅವರು ಕಣದಿಂದ ಹಿಂದೆ ಸರಿದ ಕುರಿತು ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...