alex Certify BREAKING: ಸಿ.ಎಂ. ಇಬ್ರಾಹಿಂಗೆ ಮತ್ತೊಂದು ಶಾಕ್: ಜೆಡಿಎಸ್ ನಿಂದ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿ.ಎಂ. ಇಬ್ರಾಹಿಂಗೆ ಮತ್ತೊಂದು ಶಾಕ್: ಜೆಡಿಎಸ್ ನಿಂದ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿದ್ದಾರೆ.

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ವಿರೋಧಿಸಿದ್ದ ಸಿಎಂ ಇಬ್ರಾಹಿಂ ಪ್ರತ್ಯೇಕ ಸಭೆ ನಡೆಸಿದ್ದರು. ಪಕ್ಷದ ನಾಯಕರ ನಡೆಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಸಮಿತಿ ವಿಸರ್ಜಿಸಿ ಅಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ಕೈ ಬಿಟ್ಟು ಹೆಚ್.ಡಿ. ಕುಮಾರಸ್ವಾಮಿಯವರಿಗೆ ಸಾರಥ್ಯ ವಹಿಸಲಾಗಿತ್ತು.

ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಇಬ್ರಾಹಿಂಗೆ ಮತ್ತೊಂದು ಶಾಕ್ ನೀಡಲಾಗಿದೆ. ಈಗ ಜೆಡಿಎಸ್ ನಿಂದ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...