alex Certify ಶಾಸಕ ಶ್ರೀನಿವಾಸ್ ಪಕ್ಷ ತೊರೆದ ಬೆನ್ನಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: ಪ.ಪಂ. ಸದಸ್ಯರಿಂದ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕ ಶ್ರೀನಿವಾಸ್ ಪಕ್ಷ ತೊರೆದ ಬೆನ್ನಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: ಪ.ಪಂ. ಸದಸ್ಯರಿಂದ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ

ತುಮಕೂರು: ಗುಬ್ಬಿ ಜೆಡಿಎಸ್ ಶಾಸಕರಾಗಿದ್ದ ಎಸ್ ಆರ್.  ಶ್ರೀನಿವಾಸ್ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಎಸ್.ಆರ್. ಶ್ರೀನಿವಾಸ ಅವರಿಗೆ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಸದಸ್ಯರು ಬಾಹ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಪಕ್ಷದ 9 ಸದಸ್ಯರು ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ಘೋಷಿಸಿದ್ದಾರೆ.

ನಮಗೆ ಜೆಡಿಎಸ್ ಪಕ್ಷದ ಮೇಲೆ ಯಾವುದೇ ಅಸಮಾಧಾನ ಇಲ್ಲ. ಗುಬ್ಬಿ ಜೆಡಿಎಸ್ ಅಭ್ಯರ್ಥಿ ನಾಗರಾಜ್ ಮೇಲೆ ಮಾತ್ರ ಅಸಮಾಧಾನ ಇದೆ. ವಿವಿಧ ಸಭೆ ಸಮಾರಂಭಗಳಿಗೆ ಆಹ್ವಾನ ನೀಡದೆ ನಿರ್ಲಕ್ಷ ತೋರಿದ್ದಾರೆ. ಹಾಗಾಗಿ ಜೆಡಿಎಸ್ ಪಕ್ಷದಲ್ಲಿದ್ದುಕೊಂಡೇ ಕಾಂಗ್ರೆಸ್ ಗೆ ಬೆಂಬಲ ಕೊಡುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...