alex Certify BIG BREAKING: ರೈತರು, ಯುವಕರು, ಮಹಿಳೆಯರಿಗೆ ‘ಪಂಚರತ್ನ’ ಯೋಜನೆ ಘೋಷಣೆ; ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೈತರು, ಯುವಕರು, ಮಹಿಳೆಯರಿಗೆ ‘ಪಂಚರತ್ನ’ ಯೋಜನೆ ಘೋಷಣೆ; ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಜೆಡಿಎಸ್ ಪಕ್ಷದಿಂದ ಪಂಚರತ್ನ ಯೋಜನೆ ಘೋಷಣೆ ಮಾಡಿದ್ದೇವೆ ಎಂದು ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ ಯೋಜನೆಗಳನ್ನು ಘೋಷಣೆ ಮಾಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರತದ ಕೇತಗಾನಹಳ್ಳಿಯಲ್ಲಿ ಮಾತನಾಡಿದ ಅವರು, ಸಾಲಮನ್ನಾ ಶಾಶ್ವತ ಪರಿಹಾರ ಅಲ್ಲ. ರೈತರಿಗೆ ನೆರವಾಗಬೇಕು. ರೈತರು ಸಾಲವನ್ನು ಮಾಡದ ರೀತಿಯಲ್ಲಿ ನೆರವಾಗಬೇಕು. ಇದಕ್ಕಾಗಿ ಸರ್ಕಾರದ ಮೂಲಕ ಆರ್ಥಿಕವಾಗಿ ನೆರವಾಗುವ ಯೋಜನೆ ರೂಪಿಸಲಾಗಿದೆ ಎಂದರು.

ಮಹಿಳೆಯರು, ಯುವಕರಿಗೆ ಉದ್ಯೋಗ ನೀಡುವ ಯೋಜನೆ ರೂಪಿಸಲಾಗಿದೆ. ಜನವರಿಯಿಂದ ರಾಜ್ಯದ ಪ್ರತಿ ಹಳ್ಳಿಹಳ್ಳಿಗೂ ಹೋಗುತ್ತೇವೆ. ಮಹಿಳೆಯರಿಗೆ, ವಿಧವೆಯರು, ಬಿಸಿಯೂಟ ತಯಾರಕರು, ಹಿರಿಯ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ನೆರವು ಸೇರಿದಂತೆ ಹಲವಾರು ವಿಚಾರಗಳನ್ನು ಜನರ ಮುಂದೆ ಇಡಲಾಗುವುದು ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...