alex Certify BIG NEWS: G.T.D ಉಳಿಸಿಕೊಳ್ಳಲು JDS ರಣತಂತ್ರ; ಲಲಿತಾ ದೇವೇಗೌಡರನ್ನು ಕಣಕ್ಕಿಳಿಸಲು ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: G.T.D ಉಳಿಸಿಕೊಳ್ಳಲು JDS ರಣತಂತ್ರ; ಲಲಿತಾ ದೇವೇಗೌಡರನ್ನು ಕಣಕ್ಕಿಳಿಸಲು ಚಿಂತನೆ

ಮೈಸೂರು: ಕಾಂಗ್ರೆಸ್ ನತ್ತ ಮುಖ ಮಾಡಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್ ಪರಿಷತ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಅವರ ಪತ್ನಿ ಲಲಿತಾ ದೇವೇಗೌಡ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಈ ಕುರಿತು ಹೇಳಿಕೆ ನೀಡಿರುವ ಶಾಸಕ ಸಾ.ರಾ.ಮಹೇಶ್, ಎಂಎಲ್ ಸಿ ಚುನಾವಣೆಯನ್ನು ಜಿಟಿಡಿ ನೇತೃತ್ವದಲ್ಲೇ ನಡೆಸುತ್ತೇವೆ. ಅವರ ಕುಟುಂಬದಿಂದಲೇ ಅಭ್ಯರ್ಥಿಯಾಗಬೇಕು ಅನ್ನೋದು ನಮ್ಮ ಬಯಕೆ. ಅವರ ಇಡೀ ಕುಟುಂಬ ಸಾರ್ವಜನಿಕ ಸೇವೆ ಮಾಡುತ್ತಿದ್ದು, ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡ ಮಾತ್ರಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅವರು ಇನ್ನೂ ನಮ್ಮ ಪಕ್ಷದಲ್ಲೇ ಇದ್ದಾರೆ ಎಂದು ಹೇಳಿದ್ದಾರೆ.

ಈ ಮೂಲಕ ವಿಧಾನಪರಿಷತ್ ಚುನಾವಣೆಗೆ ಜಿಟಿಡಿ ಪತ್ನಿ ಲಲಿತಾ ದೇವೇಗೌಡ ಅವರಿಗೆ ಟಿಕೆಟ್ ನೀಡಲು ಜೆಡಿಎಸ್ ಚಿಂತನೆ ನಡೆಸಿದೆ ಎಂಬುದು ಖಚಿತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...