alex Certify ಸ್ವಾತಂತ್ರ್ಯ ದಿನದಂದು ಜೆಡಿಎಸ್ ಆರಂಭಿಸಲು ಉದ್ದೇಶಿಸಿದ್ದ ಪಂಚರತ್ನ ಯಾತ್ರೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯ ದಿನದಂದು ಜೆಡಿಎಸ್ ಆರಂಭಿಸಲು ಉದ್ದೇಶಿಸಿದ್ದ ಪಂಚರತ್ನ ಯಾತ್ರೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆಯ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ವಾತಂತ್ರ್ಯ ದಿನದಂದು ಆರಂಭಿಸಲು ಉದ್ದೇಶಿಸಲಾಗಿದ್ದ ಪಂಚರತ್ನ ಯಾತ್ರೆ ಮುಂದೂಡಲಾಗಿದೆ.

ರಥಯಾತ್ರೆ ಮಾರ್ಗದ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಯಾಣಿಸುವ ಕ್ಯಾರವಾನ್ ಹಾಗೂ ಯಾತ್ರೆಯ ವಾಹನಗಳು ಸಿದ್ಧವಾಗಲು ಇನ್ನಷ್ಟು ದಿನ ಸಮಯ ಬೇಕಿರುವುದರಿಂದ ಕೆಲವು ದಿನಗಳ ಮಟ್ಟಿಗೆ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.

ಹಳೆ ಮೈಸೂರು, ಕರಾವಳಿ, ಬಯಲು ಸೀಮೆ, ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ಕು ಹಂತದಲ್ಲಿ ಮೂರು ತಿಂಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಆಗಸ್ಟ್ 15ರಂದು ಮೈಸೂರು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಯಾತ್ರೆ ಆರಂಭಿಸಬೇಕಿತ್ತು, ಮಳೆಯ ಕಾರಣ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...