ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಕ್ರಮ ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಅವರು ಸಲ್ಲಿಸಿದ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷೆನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ನಿಯಮಗಳಿಗೆ ವಿರುದ್ಧವಾಗಿ ತಮ್ಮನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದಾರೆ. ನಿಯಮ ಬಾಹಿರವಾಗಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಿದ್ದು, ಈ ನೇಮಕಾತಿ ರದ್ದು ಮಾಡಬೇಕೆಂದು ಕೋರಿ ಇಬ್ರಾಹಿಂ ಅವರು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅವರು ಸಲ್ಲಿಸಿದ್ದ ದಾವೆಯನ್ನು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ. ವಿಚಾರಣೆ ನಡೆಸಿದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರದ ಎಸ್.ಕೆ. ಸಾವಿತ್ರಿ ಅವರು ದಾವೆ ವಜಾಗೊಳಿಸಿ ಆದೇಶಿಸಿದ್ದಾರೆ.
ನಿಯಮಗಳಿಗೆ ವಿರುದ್ಧವಾಗಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಇಬ್ರಾಹಿಂ ಆಕ್ಷೇಪಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ರಾಜ್ಯಾಧ್ಯಕ್ಷ ಸ್ಥಾನದಿಂದ ಅವರನ್ನು ಉಚ್ಚಾಟಿಸಲಾಗಿತ್ತು.