alex Certify BIG NEWS: ಭವಾನಿ ರೇವಣ್ಣಗೆ ಬಿಗ್ ಶಾಕ್: ಸ್ವರೂಪ್ ಗೆ ಹಾಸನ ಜೆಡಿಎಸ್ ಟಿಕೆಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭವಾನಿ ರೇವಣ್ಣಗೆ ಬಿಗ್ ಶಾಕ್: ಸ್ವರೂಪ್ ಗೆ ಹಾಸನ ಜೆಡಿಎಸ್ ಟಿಕೆಟ್ ಘೋಷಣೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಸ್ವರೂಪ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗಾಗಿ ಬಿಗಿಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಅವರಿಗೆ ನಿರಾಸೆಯಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.

ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಹಾಸನ ಕ್ಷೇತ್ರದಿಂದ ಸ್ವರೂಪ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಸನದಲ್ಲಿ ಸ್ವರೂಪ್ ಅಭಿಮಾನಿಗಳು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದ್ದಾರೆ. ಸಿಹಿ ತಿನ್ನಿಸಿ ಜೆಡಿಎಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಜೈಕಾರ ಕೂಗಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಹಾಸನ ಜೆಡಿಎಸ್ ಟಿಕೆಟ್ ಗಾಗಿ ಕೊನೆಯ ಕ್ಷಣದವರೆಗೂ ಹೆಚ್.ಡಿ. ರೇವಣ್ಣ ಅವರು ಮಾಡಿದ ಪ್ರಯತ್ನ ವಿಫಲವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...