alex Certify JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ‘ಕ್ಯಾಂಪಸ್ ಸಂದರ್ಶನ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ‘ಕ್ಯಾಂಪಸ್ ಸಂದರ್ಶನ’ ಆಯೋಜನೆ

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 31 ರಂದು ನಾಳೆ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಟೊಯೋಟ ಕಿರ್ಲೋಸ್ಕರ ಕಂಪನಿಯಲ್ಲಿ ಅಪ್ರೆಂಟೀಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ಹೆಚ್.ಎಂ.ಪಂಡಿತಾರಾಧ್ಯ ಅವರು ತಿಳಿಸಿದ್ದಾರೆ.

ಸಂದರ್ಶನದಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ತರಬೇತಿದಾರರು ಭಾಗವಹಿಸಬಹುದು.

ದಾಖಲೆಗಳು

ಸಂದರ್ಶನದಲ್ಲಿ ಭಾಗವಹಿಸುವವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ಮತ್ತು ತಪ್ಪದೇ ಸ್ಮಾರ್ಟ್ ಮೊಬೈಲ್ನ್ನು ತರಬೇಕು. 18 ವರ್ಷ ಮೇಲ್ಪಟ್ಟವರು ಅರ್ಹರಾಗಿರುತ್ತಾರೆ.ಮೇ 31 ರಂದು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದ್ದು, ಜೂನ್ 01 ರಂದು ವೈದ್ಯಕೀಯ ಪರೀಕ್ಷೆ ನಡೆಯಲಿದೆ.ಅರ್ಹರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...