alex Certify JOB ALERT : ರಾಜ್ಯ ಸರ್ಕಾರದಿಂದ ಚನ್ನಪಟ್ಟಣದಲ್ಲಿ ನಾಳೆ ‘ಉದ್ಯೋಗ ಮೇಳ’, ಈ ರೀತಿ ನೊಂದಣಿ ಮಾಡಿಕೊಳ್ಳಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ರಾಜ್ಯ ಸರ್ಕಾರದಿಂದ ಚನ್ನಪಟ್ಟಣದಲ್ಲಿ ನಾಳೆ ‘ಉದ್ಯೋಗ ಮೇಳ’, ಈ ರೀತಿ ನೊಂದಣಿ ಮಾಡಿಕೊಳ್ಳಿ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ದಿನಾಂಕ 30 ಆಗಸ್ಟ್ 2024 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಆಸಕ್ತರು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ರಾಮನಗರ ಇವರ ಸಹಯೋಗದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಚೆ ಕಛೇರಿ ರಸ್ತೆ, ಚನ್ನಪಟ್ಟಣ ಇಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 150ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದೆ.

ಆಸಕ್ತರು ನೋಂದಣಿ ಮಾಡಿಕೊಳ್ಳಲು https://skillconnect.kaushalkar.com/ ಲಿಂಕ್ ಅನ್ನು ಬಳಕೆ ಮಾಡಬಹುದು.ಅರ್ಹತೆ : ಎಸ್ಎಸ್ಎಲ್ಸಿ (ಉತ್ತೀರ್ಣ/ ಅನುರ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಎಲ್ಲಾ ಪದವೀಧರರು ಪಾಲ್ಗೊಳ್ಳಬಹುದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...