alex Certify ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ: ನಾಳೆಯಿಂದ ಜೆ.ಪಿ. ನಡ್ಡಾ ಮಿಂಚಿನ ಸಂಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ: ನಾಳೆಯಿಂದ ಜೆ.ಪಿ. ನಡ್ಡಾ ಮಿಂಚಿನ ಸಂಚಾರ

ಬೆಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಮಧ್ಯಾಹ್ನ ತುಮಕೂರಿನಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಅವರು ಭಾಗಿಯಾಗುವರು. ತುಮಕೂರು ಮತ್ತು ಮಧುಗಿರಿಯಲ್ಲಿ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ ನಡೆಯಲಿದ್ದು, ಸಭೆಯಲ್ಲಿ ನಡ್ಡಾ ಭಾಗವಹಿಸುವರು. ನಂತರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.

ನಾಳೆ ಸಂಜೆ ಚಿತ್ರದುರ್ಗದಲ್ಲಿ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಎಸ್ಸಿ, ಎಸ್ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿರುವ ನಡ್ಡಾ ಮಾದರ ಚೆನ್ನಯ್ಯ, ಸಿರಿಗೆರೆ ತರಳಬಾಳು ಮಠಕ್ಕೆ ಭೇಟಿ ನೀಡಲಿದ್ದಾರೆ. ದಾವಣಗೆರೆ ವಿಭಾಗದ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರೊಂದಿಗೆ ಸಭಾಲೋಚನೆ ನಡೆಸುವರು.

ಜನವರಿ 6ರಂದು ಬೆಳಿಗ್ಗೆ ಬೆಳ್ಳೂಡಿಯ ಕನಕ ಗುರು ಪೀಠ, ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠ, ಹರಿಹರದ ಪಂಚಮಸಾಲಿ ಮಠಕ್ಕೆ ಭೇಟಿ ನೀಡುವರು. ನಂತರ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಬೂತ್ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ತುಮಕೂರು ಜಿಲ್ಲೆ ಶಿರಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಗಳಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ಭಾಗವಹಿಸಲಿದ್ದಾರೆ. ಅರುಣ್ ಸಿಂಗ್ ಇಂದು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿ ಬೆಂಗಳೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಚಾರ ನಡೆಸಿ ಅಧಿಕೃತ ಕಾರ್ಯಕ್ರಮಗಳೊಂದಿಗೆ ಪಕ್ಷದ ಸಭೆ ಸಮಾವೇಶಗಳಲ್ಲಿಯೂ ಭಾಗವಹಿಸಿ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...