alex Certify ನ್ಯಾಯ ಅಂದ್ರೆ ನ್ಯಾಯ..ಜೈ ಆಂಜನೇಯ : ಮೋಹಕ ತಾರೆಗೆ ಟಾಂಗ್ ಕೊಟ್ಟ ನಟ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯಾಯ ಅಂದ್ರೆ ನ್ಯಾಯ..ಜೈ ಆಂಜನೇಯ : ಮೋಹಕ ತಾರೆಗೆ ಟಾಂಗ್ ಕೊಟ್ಟ ನಟ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ

ಬೆಂಗಳೂರು : ಬಹು ನಿರೀಕ್ಷಿತ ‘ಹಾಸ್ಟೆಲ್ ಹುಡುಗರು’ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಓಪನಿಂಗ್ಸ್ ಸಿಕ್ಕಿದೆ.

ಚಿತ್ರದಲ್ಲಿ ನನ್ನ ದೃಶ್ಯವನ್ನು ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಹಾಸ್ಟೆಲ್ ಹುಡುಗರಿಗೆ ನಟಿ ರಮ್ಯಾ ನೋಟಿಸ್ ನೀಡಿದ್ದರು. ಅಲ್ಲದೇ ಚಿತ್ರಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ನಟಿ ರಮ್ಯಾ ಕಮರ್ಷಿಯಲ್ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸುವ ಮೂಲಕ ಹಾಸ್ಟೆಲ್ ಹುಡುಗರ ಪರ ತೀರ್ಪು ನೀಡಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ರಮ್ಯಾಗೆ ನಟ , ನಿರ್ದೇಶಕ ರಿಷಬ್ ಶೆಟ್ಟಿ, ಹಾಗೂ ನಟ ರಾಜ್ ಬಿ ಶೆಟ್ಟಿ ಟಾಂಗ್ ನೀಡಿದ್ದಾರೆ. ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿರುವ ನಟ ರಿಷಬ್ ಶೆಟ್ಟಿ ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ!!ನಾಳೆ ಹಾಸ್ಟೆಲ್ ಹುಡುಗರು ರಿಲೀಸ್ ಆಗ್ತಿದೆ… ಥಿಯೇಟರ್ ನಲ್ಲಿ ಸಿಗೋಣ!! ಎಂದು ಪೋಸ್ಟ್ ಮಾಡಿದ್ದಾರೆ.

ಅದೇ ರೀತಿ ನಟ ರಾಜ್ ಬಿ ಶೆಟ್ಟಿ ಕೂಡ ಪೋಸ್ಟ್ ಮಾಡಿದ್ದು, ಬನ್ನಿ ಬಾಯ್ಸ್..ಬನ್ನಿ ಬನ್ನಿ ಬನ್ನಿ… ಎಲ್ಲಿ ಬೆಂಕಿ ಬೀಳುತ್ತೋ ನೋಡೋಣ..ಹಾಕ್ರೋ ಸ್ಟೆಪ್ಪು ಎಂದು ಪೋಸ್ಟ್ ಮಾಡಿದ್ದಾರೆ.

 

‘ಹಾಸ್ಟೆಲ್ ಹುಡುಗರು’ ಚಿತ್ರದಲ್ಲಿ ನನ್ನ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ, ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಮತ್ತಿತ್ತರ ಕಂಟೆಂಟ್ ಗಳನ್ನು ತೆಗೆದುಹಾಕಬೇಕು ಎಂದು ನಟಿ ಡಿಮ್ಯಾಂಡ್ ಮಾಡಿದ್ದರು. ಅಲ್ಲದೇ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ ನಲ್ಲಿ ಒತ್ತಾಯಿಸಿದ್ದರು.
ಹಾಸ್ಟೆಲ್ ಹುಡುಗರು’ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಓಪನಿಂಗ್ಸ್ ಸಿಕ್ಕಿದೆ. ಹೊಸ ಪ್ರತಿಭೆಗಳಿಗೆ ನಟ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ, ನಟ ದಿಗಂತ್ ಸಾಥ್ ನೀಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...